LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಂಪ್ಲಿ ಸೇತುವೆ ಮುಳುಗಡೆ ಭೀತಿ, ಬಳ್ಳಾರಿ - ಕೊಪ್ಪಳ ನೇರ ಸಂಪರ್ಕ ಸ್ಥಗಿತ

Advertisement
ತುಂಗಭದ್ರಾ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ತುಂಗಭದ್ರಾ : ಜಲಾಶಯದಿಂದ ನದಿಗೆ 90 ಸಾವಿರ ಕ್ಯೂಸೆಕ್‌ಗೂ ಅಧಿಕ ಪ್ರಮಾಣದ ನೀರು ಹರಿಸಿದ ಪರಿಣಾಮ, ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರುವ ಕಂಪ್ಲಿ ಸೇತುವೆ ಮೇಲಿನ ಸಂಚಾರ ನಿಷೇಧ ಮಾಡಿ ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದೆ.

ಲೋಕೋಪಯೋಗಿ ಇಲಾಖೆಯ ಗಂಗಾವತಿ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಶ್ವನಾಥ್ ಈ ಆದೇಶ ಹೊರಡಿಸಿದ್ದು, ನದಿಯಲ್ಲಿ ಪ್ರವಾಹದ ಸನ್ನಿವೇಶ ನಿರ್ಮಾಣವಾಗಿದೆ. ಹೀಗಾಗಿ ಸೇತುವೆ ಮೇಲಿನ ವಾಹನ ಮತ್ತು ಜನ ಸಂಚಾರ ನಿಷೇಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಂದಾಯ ಮತ್ತು ಪೊಲೀಸ್ ಇಲಾಖೆಗೆ ಪ್ರತಿಗಳನ್ನು ರವಾನಿಸಿದ್ದಾರೆ.

ಕಂಪ್ಲಿ- ಗಂಗಾವತಿ ಜನರ ಪರದಾಟ:ಕಂಪ್ಲಿ ಮತ್ತು ಗಂಗಾವತಿ ಆಡಳಿತಾತ್ಮಕವಾಗಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗೆ ಸೇರಿವೆಯಾದರೂ, ಭೌಗೋಳಿಕವಾಗಿ ಎರಡು ತಾಲೂಕಿನ ಗಡಿಗಳು ಕೇವಲ ಒಂದು ಕಿಲೋ ಮೀಟರ್ ಅಂತರದಲ್ಲಿವೆ. ಚಿಕ್ಕಜಂತಕಲ್-ಕಂಪ್ಲಿ ಬಳಿ ಇರುವ ಸುಮಾರು ಒಂದು ಕಿಲೋ ಮೀಟರ್ ಉದ್ದದ ಸೇತುವೆಯೇ ಈ ಎರಡೂ ತಾಲೂಕನ್ನು ವಿಭಜಿಸಿದೆ.

ಕಂಪ್ಲಿಯ ಬಹುತೇಕ ಜನ ಶಿಕ್ಷಣ, ಆರೋಗ್ಯ, ತರಕಾರಿ, ಹಣ್ಣು, ಕಿರಾಣಿ, ಕಬ್ಬಿಣ ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿಯಂತ ಕಾರಣಕ್ಕೆ ಗಂಗಾವತಿಯನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ. ಇದೀಗ ಕಂಪ್ಲಿ ಸೇತುವೆ ಮುಳುಗಡೆಯಾದರೆ, ಜನ ಇನ್ನಿಲ್ಲದಂತೆ ಪರದಾಡುವ ಸನ್ನಿವೇಶ ನಿರ್ಮಾಣವಾಗಲಿದೆ.

ಕೇವಲ ಒಂದು ಕಿಲೋ ಮೀಟರ್ ಅಂತರದಲ್ಲಿರುವ ಗಂಗಾವತಿ ತಾಲೂಕಿನ ಗಡಿಗೆ ಬರಲು, ಸುತ್ತು ಬಳಸಿ ಬುಕ್ಕಸಾಗರ, ಕಡೇಬಾಗಿಲು ಸೇತುವೆ ದಾಟಿ ಸುಮಾರು 20 ಕಿಲೋ ಮೀಟರ್ ಸುತ್ತು ಬಳಸಿ ಗಂಗಾವತಿಗೆ ಬರಬೇಕಾದ ಸ್ಥಿತಿ ಇದೆ. ಮುಖ್ಯವಾಗಿ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಇದು ಸಮಸ್ಯೆಯಾಗಿದೆ.

ಗ್ರಾಮಗಳಲ್ಲಿ ಡಂಗೂರ :ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸುತ್ತಿರುವ ಹಿನ್ನೆಲೆ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ನದಿಯ ಸನಿಹಕ್ಕೆ ಹೋಗದಂತೆ ನದಿಪಾತ್ರದ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿಗಳಿಂದ ಡಂಗುರ ಸಾರಲಾಗುತ್ತಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ