Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಲಾರಕೊಟ್ ಗ್ರಾಮದಲ್ಲಿ ಕನಕ ಜಯಂತಿ ಅದ್ದೂರಿಯಾಗಿ ಆಚರಣೆ

Advertisement
ಸೇಡಂ: ತಾಲೂಕಿನ ಶಿಲಾರಕೋಟ್ ಗ್ರಾಮದಲ್ಲಿ ಕನಕದಾಸರ ಜಯಂತಿಯನ್ನು ಕನಕ ದಾಸರ ಚಿತ್ರಪಟವನ್ನು ಊರಿನ ವಿವಿಧ ಬೀದಿಗಳಲ್ಲಿ ಡೊಳ್ಳು ಕುಣಿತ ಮುಖಾಂತರ ಮೆರವಣಿಗೆ ಮಾಡಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.



ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಭೀಮರೆಡ್ಡಿ ಅವರು ಮಾತನಾಡಿ ಪ್ರತಿವರ್ಷದಂತೆ ಈ ವರ್ಷ ಕೂಡ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ ದಿನದಿಂದದಿನಕ್ಕೆ ಸಮಾಜದಲ್ಲಿ ಸಂತ, ಕವಿಗಳ ಜಾಗೃತಿ ಮೂಡಿಬರುತ್ತಿದ್ದು ಇನ್ನಷ್ಟು ಜಾಗೃತಿಗಾಗಿ ಕನಕದಾಸರ ಮೂರ್ತಿ ಸ್ಥಾಪನೆ ಮತ್ತು ಸಮುದಾಯ ಭವನ ನಿರ್ಮಾಣಕ್ಕೆ ಅದಷ್ಟು ಪ್ರಯತ್ನ ಮಾಡಿ ಈ ವರ್ಷದಲ್ಲಿ ಶಂಕುಸ್ಥಾಪನೆ ಮಾಡಲಾಗುವುದು ಎಂದು ಹಾಲುಮತ ಸಮಾಜದ ಮುಖಂಡರಿಗೆ ಭರವಸೆ ನೀಡಿದರು.

ಊರಿನ ಮುಖಂಡರಾದ ಮಹಿಪಾಲ್ ರೆಡ್ಡಿ ಅವರು ಮಾತನಾಡಿ ಸಮಾಜದ ಹಿತಕ್ಕಾಗಿ ದಾಸರ ಪದಗಳನ್ನು ನಾವು ಅಳವಡಿಸಿಕೊಳ್ಳಬೇಕು ಮತ್ತು ಅವರ ತತ್ವಗಳನ್ನು ಈಗಿನ ಯುವಜನತೆಗೆ ತಿಳಿಸಿ ಮುಂದಿನ ದಿನಗಳಲ್ಲಿ ಕನಕ ದಾಸರ ಜಯಂತಿಯನ್ನು ಇನ್ನಷ್ಟು ಅದ್ದೂರಿಯಾಗಿ ಆಚರಣೆ ಮಾಡಬೇಕು ಅದಕ್ಕೆ ನಮ್ಮ ಸಹಕಾರ ಕೂಡ ಇರುತ್ತದೆ ಎಂದು ಹೇಳಿದರು.

ಈ ವೇಳೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಜನವಾಡ ಶಾಲೆಯ ಮುಖ್ಯ ಗುರುಗಳಾದ ಈರಪ್ಪ ಪೂಜಾರಿಯವರು ಅವರು ಮಾತನಾಡಿ ಕನಕ ದಾಸರ ಜಯಂತಿಯನ್ನು ಆಚರಣೆ ಮಾಡುತ್ತಿರುವುದು ತುಂಬ ಹೆಮ್ಮೆಯಿದೆ ಆದರೆ ಇದರ ಜೊತೆಗೆ ಈಗಿನ ಯುವಜನತೆ ಕಲಿಕೆ ಕಡೆ ಕೂಡ ಹೆಚ್ಚು ಗಮನ ಕೊಡಬೇಕಿದೆ.

ಅದಕ್ಕಾಗಿ ಗ್ರಾಮ ಪಂಚಾಯತ್ ಆಡಳಿತವು ಊರಿನ ಮಕ್ಕಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಗ್ರಾಮ ಪಂಚಾಯತ್ ವತಿಯಿಂದ ಕೇಂದ್ರ ಗ್ರಂಥಾಲಯವನ್ನು ಮಾಡಿಕೊಡಬೇಕು ಎಂದು ಸದಸ್ಯರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಭೀಮರೆಡ್ಡಿ ದೇವಾಡಿ, ಮಹಿಪಾಲ ರೆಡ್ಡಿ, ಬಸಪ್ಪ ಸಾಹುಕಾರ್, ಈರಪ್ಪ ಪೂಜಾರಿ ಮುಖ್ಯ ಗುರುಗಳು, ರಾಜು ಪೂಜಾರಿ, ಬಾಲಪ್ಪ ಪೂಜಾರಿ, ಸಾಯಿಲು ಪೂಜಾರಿ, ಮದರಪ್ಪ ಪೂಜಾರಿ, ಮಹೇಶ್ ಪೂಜಾರಿ, ರೈತ ಸಂಘ ಕಾರ್ಯದಕ್ಷರಾದ ಸಾಬಪ್ಪ ಅಬ್ಬಗಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ