Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ  ಸಮಿತಿ ವತಿಯಿಂದ ಪ್ರತಿಭಟನಾ ಧರಣಿ

Advertisement
ಕಾಳಗಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ, ರಾಜ್ಯ ಸಮಿತಿ ಆದೇಶದ ಮೇರೆಗೆ ತಾಲೂಕು ಸಮಿತಿ ಕಾಳಗಿ ವತಿಯಿಂದ ದಲಿತರ- ಭೂಮಿ ವಸತಿ ಹಕ್ಕಿಗಾಗಿ ಮತ್ತು ಇತರೆ ಹಾಕ್ಕೋತ್ತಾಯಗಳಿಗೆ ಆಗ್ರಹಿಸಿ ಶುಕ್ರವಾರ ತಹಸೀಲ್ದಾರ್ ಕಾರ್ಯಾಲಯ ಎದುರುಗಡೆ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಯಿತು, ಈ ವೇಳೆಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಬಾಬುರಾವ ಶೇಳ್ಳಗಿ ಅವರು ಮಾತನಾಡಿ ಪರಿಶಿಷ್ಟ ಜಾತಿ / ವರ್ಗ ಹಾಗೂ ಭೂಹೀನ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಭಗರ್ ಹುಕುಂ ಸಾಗುವಳಿ ದರಖಾಸ್ತು ಮಂಜೂರಾತಿ ಸಕ್ರಮಿಕರಣ ಕಾಲಮಿತಿಯೊಳಗೆ ಇತ್ಯಾರ್ಥಗೊಳಿಸಬೇಕು, ವಿನಾಕಾರಣ ವಜಾಗೊಳಿಸುವ ಭಗರ ಹುಕುಂ ಸಾಗುವಳಿ ಅರ್ಜಿಗಳನ್ನು ಮರುಪರಿಶೀಲಿಸಬೇಕು, ಪರಿಶಿಷ್ಟ ಪಿಟಿಸಿ ಎಲ್ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು, ಹೈ ಕೋರ್ಟ್ಗಳಲ್ಲಿ ಪಿಟಿಸಿಎಲ್ ಪ್ರಕರಣಗಳು ವಜಾಗೊಳಿಸುತ್ತಿದ್ದು, ನುರಿತ ಹಿರಿಯ ವಕೀಲರನ್ನು ನೇಮಿಸಿ ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಬೇಕು,ಎಂದು ಅನೇಕ ಹಾಕೋತ್ತಾಯದ ಕುರಿತು ಮಾತನಾಡಿದರು .

ಈ ಸಂಧರ್ಭದಲ್ಲಿ ಮಲ್ಲಿಕಾರ್ಜುನ ಗವ್ಹಾರ್ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಕಾಳಗಿ ಸಂಚಾಲಕರು ಭಗರ್ ಹುಕುಂ ಸಾಗುವಳಿ ಮಾಡಿದ ರೈತರು 54,53,&57 ಅರ್ಜಿ ಸಲ್ಲಿಸಿರುವ ಎಲ್ಲಾ ರೈತರಿಗೆ, ಹಾಗೂ ದಲಿತ ತಳ ಸಮುದಾಯಗಳ ಸುಮಾರು 20- 30 ವರ್ಷಗಳಿಂದ ಸಾಗುವಳಿ ಮಾಡಿದ ಎಲ್ಲಾ ರೈತರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಪ್ರತಿಭಟನಾ ಧರಣಿಯಲ್ಲಿ ತಿಳಿಸಿದರು, ನಂತರ ತಹಸೀಲ್ದಾರ್ ರವರಿಗೆ ಮನವಿ ಪತ್ರ ನೀಡಲಾಯಿತು ,ಈ ಸಂದರ್ಭದಲ್ಲಿ: ತಾಲೂಕ ಸಂಘಟನಾ ಸಂಚಾಲಕರುಗಳು ಮತ್ತು ರೈತರು, ಈ ಪ್ರತಿಭಟನಾ ಧರಣಿಯಲ್ಲಿ ಭಾಗಿಯಾಗಿದ್ದರು.

ವರದಿ : ಹಣಮಂತ ಕುಡಹಳ್ಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ