Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ : ಪಿ. ರಾಜೀವ್

Advertisement

ಬೆಂಗಳೂರು: ರಾಜ್ಯದ ಸಿಎಂ, ಗೃಹ ಸಚಿವರ ಕೃಪಾಕಟಾಕ್ಷದಿಂದ ಇವತ್ತು ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು.


ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಜೀವಂತ ಇದೆಯಾ ಎಂಬ ಸಂಶಯ ಎಲ್ಲರಲ್ಲಿ ಮನೆಮಾಡುತ್ತಿದೆ.


ಕರ್ನಾಟಕದಲ್ಲಿ ಹೆಣ್ಮಕ್ಕಳು, ವಿದ್ಯಾರ್ಥಿಗಳ ಜೀವಕ್ಕೆ ಸುರಕ್ಷತೆ ಇಲ್ಲವಾಗಿದೆ. ದಲಿತರ ಮನೆಗೆ ನುಗ್ಗಿ ಪೋಷಕರ ಸಮ್ಮುಖದಲ್ಲೇ ಒಬ್ಬ ದಲಿತ ಯುವಕನನ್ನು ಮರ್ಮಾಂಗಕ್ಕೆ ಒದ್ದು, ಕತ್ತು ಹಿಸುಕಿ ಸಾಯಿಸುವ ಘಟನೆ ಈ ಕರ್ನಾಟಕದಲ್ಲಿ ನಡೆದಿದೆ ಎಂದರು.


ಯಾದಗಿರಿಯಲ್ಲಿ ಮೊನ್ನೆ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ರಾಕೇಶ್ ಅವರ ಹತ್ಯೆಯಾಗಿದೆ; ಆದರೆ, ನಿನ್ನೆ ಮಧ್ಯಾಹ್ನ 1 ಗಂಟೆಗೆ ಎಫ್‍ಐಆರ್ ದಾಖಲಾಗಿದೆ. ಕಾನೂನು- ಸುವ್ಯವಸ್ಥೆ ಈ ರಾಜ್ಯದಲ್ಲಿ ಜೀವಂತ ಇದೆಯೇ ಎಂದು ಪ್ರಶ್ನಿಸಿದರು.


ಒಬ್ಬ ದಲಿತ ಯುವಕನ ಕೊಲೆಯನ್ನು ಮುಚ್ಚಿ ಹಾಕುವ ಕೆಲಸ ಈ ರಾಜ್ಯದಲ್ಲಿ ನಡೆದಿದೆಯಲ್ಲವೇ? ಒಬ್ಬ ದಲಿತನ ಹತ್ಯೆಯಾಗಿ 14 ಗಂಟೆ ವರೆಗೆ ಎಫ್‍ಐಆರ್ ಮಾಡಲು ಪೊಲೀಸ್ ಇಲಾಖೆಗೆ ಸಾಧ್ಯವಿಲ್ಲವೆಂದಾದರೆ ದಲಿತ ಸಮುದಾಯದಿಂದ ಬಂದ ಗೃಹ ಸಚಿವರು ಯಾವ ಮಾನ ಮರ್ಯಾದೆ ಇಟ್ಟುಕೊಂಡು ತಮ್ಮ ಸಚಿವ ಸ್ಥಾನದ ಬಗ್ಗೆ ಹೇಳುತ್ತಾರೆ? ಯಾವ ಮುಖವನ್ನು ದಲಿತರಿಗೆ ತೋರಿಸುತ್ತೀರಿ ಎಂದು ಕೇಳಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್