Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಮಾನವ ಹಕ್ಕುಗಳ ಜನ ಸೇವಾ ಸಮಿತಿಯ ಪದಾಧಿಕಾರಿಗಳ ಪದಗ್ರಹಣ,ಗುರುತಿನ ಚೀಟಿ ವಿತರಣೆ.

Advertisement
ಮೊಳಕಾಲ್ಮುರು :- ಜನ ಸೇವೆಯೇ ಜನಾರ್ದನ ಸೇವೆ ಎಂದು ಸಮಾಜದಲ್ಲಿ ಕಷ್ಟದಿಂದ ಇರುವ ವ್ಯಕ್ತಿಗಳಿಗೆ ಸಹಾಯ ಮಾಡಬೇಕು ಎಂದು ವಿಜಿಯ ಮಹಾಂತೇಶ್ವರ ಶಾಖ ಮಠದ ಬಸವಲಿಂಗ ಮಹಾಸ್ವಾಮಿಗಳು ತಿಳಿಸಿದರು.ಪಟ್ಟಣದಲ್ಲಿ ಬುಧುವಾರ ಕರ್ನಾಟಕ ಮಾನವ ಹಕ್ಕುಗಳ ಜನ ಸೇವಾ ಸಮಿತಿಯ ಸದಸ್ಯರ ಪದಗ್ರಹಣ ಮತ್ತು ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ಪ್ರತಿಯೊಬ್ಬ ವ್ಯಕ್ತಿಯು ಕೂಡ ಸಮಾಜದಲ್ಲಿ ಬುದ್ಧ ಬಸವನವರು 12ನೇ ಶತಮಾನದಲ್ಲಿ ಬಸವಣ್ಣನವರು ಧಾರ್ಮಿಕವಾಗಿ ಶೈಶ್ವರ್ಣವಾಗಿ ಸಾಮಾಜಿಕವಾಗಿ ಉತ್ತಮ ಕೆಲಸಗಳನ್ನು ಮಾಡಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು.12ನೇ ಶತಮಾನದಲ್ಲಿ ಎಲ್ಲರೂ ಕಾಯಕ ಮಾಡಿ ಈಗಿನ ಬದಲಾವಣೆಯ ಎಲ್ಲಾ ತದ್ವಿರುದ್ಧವಾಗಿದೆ.ಆದ್ದರಿಂದ ಮಾನವ ಹಕ್ಕುಗಳ ಜನ ಸೇವಾ ಸಮಿತಿಯ ಸದಸ್ಯರುಗಳು ಸಮಾಜದಲ್ಲಿ ಉತ್ತಮವಾಗಿ ಬೆಳೆಯಬೇಕು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಕಷ್ಟದಲ್ಲಿ ಸಹಾಯ ಮಾಡಬೇಕು ಎಂದರು.

ಅದೇ ರೀತಿ ಗಗನಗಿರಿ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ ನಾನು ಈ ಸಂಘದ ಸದಸ್ಯರಿಗೆ ಹೇಳುವುದೇನೆಂದರೆ ಎಲ್ಲಾ ಸಂಘದ ತರಹ ನೀವು ಕೂಡ ದುಡ್ಡಿನ ವ್ಯಾಮೋಹಕ್ಕೆ ಬೀಳಬಾರದು ಕಷ್ಟದಲ್ಲಿರುವ ವ್ಯಕ್ತಿಗಳಿಗೆ ಸಹಾಯ ಮಾಡಬೇಕು ನಾವು ಈ ಭಾರತ ದೇಶದಲ್ಲಿ ಹುಟ್ಟಿರುವುದು ನಮ್ಮ ಪುಣ್ಯ ಈ ದೇಶದ ಋಣ ತೀರಿಸಬೇಕು ಎಂದು ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಮಾನವ ಹಕ್ಕುಗಳ ಜನ ಸೇವಾ ಸಮಿತಿಯ ರಾಜ್ಯ ಜಂಟಿ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ತಮ್ಮ ಅನಿಸಿಕೆಗಳನ್ನು ತಿಳಿಸಿದರು.ಅದೇ ರೀತಿ ವಿವಿಧ ಕ್ಷೇತ್ರಗಳಲ್ಲಿ ಸಾಧಕರಿಗೆ ಸನ್ಮಾನ ಕೂಡ ಮಾಡಲಾಯಿತು.

ಈ ಸಂದರ್ಭದಲ್ಲಿ ಧನಂಜಯ ಜಿ ರಾಜ್ಯ ಜಂಟಿ ಕಾರ್ಯದರ್ಶಿಗಳು ಕರ್ನಾಟಕ ಮಾನವ ಹಕ್ಕುಗಳ ಜನ ಸೇವಾ ಸಮಿತಿ ಎನ್ ಗಂಗಾಧರ ಪ್ರಕಾಶ್ ಕಾಡಪ್ಪ ಹೊನ್ನೂರ ಸ್ವಾಮಿ ಮಂಜುನಾಥ್ ಹೊನ್ನಪ್ಪ ವೆಂಕಟೇಶ್ ಆನಂದ್ ಓಬಳೇಶ್, ಲಿಂಗ ರೆಡ್ಡಿ ಅಜಯ್ ಕುಮಾರ್ ರುದ್ರಮುನಿಯಪ್ಪ ಹುಲಿಯಪ್ಪ  ವಿಜಿ ಕುಮಾರ್ ಶ್ರೀಕಾಂತ್ ದರ್ಶನ್ ನಟರಾಜ್ ನಾಗರಾಜ್ ಎರಿಸ್ವಾಮಿ ಇನ್ನು ಹಲವರು ಉಪಸ್ಥಿತರಿದ್ದರು ತಾಲೂಕ ಅಧ್ಯಕ್ಷರು.

ವರದಿ :-ಪಿಎಂ ಗಂಗಾಧರ

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ