Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಇಲಾಖೆಗೆ ಬಂದಿರುವ ಸಬ್ಸಿಡಿ ಅನುದಾನವನ್ನು ಕೊಡುವಲ್ಲಿ ತಾರತಮ್ಯ :ಕರ್ನಾಟಕ ರಾಜ್ಯ ರೈತ ಸಂಘ ಆರೋಪ

Advertisement
ಮೊಳಕಾಲ್ಮೂರು:ತಾಲೂಕಿನಲ್ಲಿ ತೋಟಗಾರಿಕೆ ಇಲಾಖೆಗೆ ಬಂದಿರುವ ಸಬ್ಸಿಡಿ ಅನುದಾನವನ್ನು ಕೊಡುವಲ್ಲಿ ತಾರತಮ್ಯ ಹಾಗೂ ಅಧಿಕೃತ ದಾಖಲೆಗಳನ್ನು ಇಲಾಖೆಗೆ ಕೊಡಲು ರೈತರಲ್ಲಿ ಗೊಂದಲವಾಗುತ್ತಿದ್ದು ಇದನ್ನು ಕೂಡಲೇ ಸರಿಪಡಿಸಬೇಕು ಎಂದು ಬೇಡ ರೆಡ್ಡಿ ಹಳ್ಳಿ ಬಸವ ರೆಡ್ಡಿ ಆರೋಪಿಸಿದರು.

ಪಟ್ಟಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ತೋಟಗಾರಿಕೆ ಇಲಾಖೆ ಮುಂದೆ ಪ್ರತಿಭಟನೆ ಮಾಡಿ ಮಾತನಾಡಿದರು.



ತೋಟಗಾರಿಕೆ ಇಲಾಖೆಯಲ್ಲಿ ಅರ್ಹ ರೈತರಿಗೆ ಸಬ್ಸಿಡಿ ನೀಡುವಲ್ಲಿ ವಿಫಲವಾಗಿದೆ, ಇದನ್ನು ಸರಿಪಡಿಸಿ ಆದೇಶ ನೀಡುವ ಮೂಲಕ ಗೊಂದಲವನ್ನು ಸರಿಪಡಿಸಬೇಕು ಸಬ್ಸಿಡಿ ಹಣ ವಿತರಣೆಯಲ್ಲಿ ಅವ್ಯವಹಾರವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ನೇರ ಒಣಗಿಹರಾಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿ ಎಷ್ಟು ರೈತರಿಗೆ ಉತ್ಪಾದಕರ ಸಂಸ್ಥೆಯ ರಚನೆಗಾಗಿ ಘಟಕವಾರು ನೀಡಲಾದ ಆರ್ಥಿಕ ನೆರವು 24 25 ನೇ ಸಾಲಿನ ಇಲಾಖೆಯಿಂದ ಸಂಸ್ಥೆಗಳಿಗೆ ಸಬ್ಸಿಡಿ ಹಣ ಎಷ್ಟು ಕೊಟ್ಟಿದ್ದೀರಾ ಸಂಸ್ಥೆಗಳು ಚಾಲ್ತಿಯಲ್ಲಿ ಇವೆಯಾ ಎಷ್ಟು ವಹಿವಾಟು ಮಾಡಿದ್ದಾರೆ ಯಾವ್ಯಾವ ರೈತರಿಗೆ ಸಬ್ಸಿಡಿ ಹಣ ನೀಡಿದ್ದೀರಾ ಎಂಬುದನ್ನು ವರದಿ ಕೊಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷರಾದ ರಾಜಣ್ಣ ಮಾತನಾಡಿ, ತಾಲೂಕಿನಲ್ಲಿ ರೈತರಿಗೆ ಅನುಕೂಲ ಹಾಗುವ ಹಾಗೆ ತೋಟಗಾರಿಕೆ ಇಲಾಖೆಯವರು ಕ್ರಮಗಳನ್ನು ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಈರಣ್ಣ ತಾಲ್ಲೂಕು ಪ್ರಧಾನ ಕಾರ್ಯದರ್ಶಿ, ಚಂದ್ರಣ್ಣ ವೀರಣ್ಣ ಲಿಂಗಣ್ಣ ಮರ್ಲಳ್ಳಿ ರವಿಕುಮಾರ್ ವಿಜು ಕುಮಾರ್ ದೊಡ್ಡಪಾಪಯ್ಯ ದೊಡ್ಡ ಸ್ಪೂರಯ್ಯ ಇನ್ನು ಹಲವರು ಉಪಸ್ಥಿತರಿದ್ದರು.

ವರದಿ :ಪಿಎಂ ಗಂಗಾಧರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ