Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಪತ್ರಕರ್ತ, ಮೈಸೂರು ಮಿತ್ರ ಪತ್ರಿಕೆಯ ಸಂಪಾದಕ ಕೆ.ಬಿ. ಗಣಪತಿ ಹೃದಯಾಘಾತಕ್ಕೆ ಬಲಿ 

Advertisement
ಮೈಸೂರು : ಹಿರಿಯ ಪತ್ರಕರ್ತ ಹಾಗೂ ಸ್ಟಾರ್‌ ಆಫ್‌ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಯ ಸಂಪಾದಕ ಕೆ.ಬಿ. ಗಣಪತಿ(85) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆಯ ಹಿರಿಯ ಪತ್ರಕರ್ತರಾಗಿದ್ದ ಅವರು ಸುಮಾರು 5 ದಶಕಗಳಿಂದ ತಮ್ಮ ಪತ್ರಿಕೆಯ ಮೂಲಕ ರಾಜ್ಯಾದ್ಯಂತ ಪ್ರಸಿದ್ದರಾಗಿದ್ದರು.ಮೈಸೂರಿನ ಕೆ.ಸಿ . ಲೇಔಟ್‌ ನ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

1993 ಮತ್ತು 1995ರ ನಡುವೆ ಕರ್ನಾಟಕ ಪತ್ರಿಕಾ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದರು. 2001ರಲ್ಲಿ ಅವರಿಗೆ ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ ನೀಡಲಾಯಿತು.

ಅವರು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರೂ ಆಗಿದ್ದರು. ಸಾಹಿತಿಯೂ ಆಗಿದ್ದ ಕೆ.ಬಿ. ಗಣಪತಿ ಅವರು, ಕನ್ನಡದಲ್ಲಿ ʼಆದರ್ಶವಾದಿʼ ಎಂಬ ಕಾದಂಬರಿ ಇಂಗ್ಲಿಷ್‌ನಲ್ಲಿ ʼಅಮೇರಿಕಾ - ಆನ್ ಏರಿಯಾ ಆಫ್ ಲೈಟ್ʼ ಎಂಬ ಪ್ರವಾಸ ಕಥನ ಇಂಗ್ಲಿಷ್‌ನಲ್ಲಿ ʼದಿ ಕ್ರಾಸ್ ಅಂಡ್ ದಿ ಕೂರ್ಗ್ಸ್ʼ ಎಂಬ ಮತ್ತೊಂದು ಕಾದಂಬರಿ ಹಾಗೂ ಅಬ್ರಕಾಡಬ್ರಾ ಎಂಬ ಆಯ್ದ ಅಂಕಣಗಳ ಸಂಗ್ರಹದ ಕರ್ತೃವಾಗಿದ್ದಾರೆ.ಅಸಂಖ್ಯಾತ ಪತ್ರಕರ್ತರು ಹಾಗೂ ರಾಜಕಾರಣಿಗಳು ಗಣಪತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್