Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂರು ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡ ಕೇರಳ ನಾವಿಕ : ರಷ್ಯಾ ದಾಳಿಗೆ ಬಲಿ

Advertisement

ಕಾಸರಗೋಡು: ಉಕ್ರೇನ್ ಮತ್ತು ರಷ್ಯಾ ನಡುವಿನ ಭೀಕರ ಯುದ್ಧವು ಮತ್ತೊಬ್ಬ ಭಾರತೀಯನ ಬಲಿಯನ್ನು ಪಡೆದಿದೆ. ಉಕ್ರೇನ್‌ನ ಒಡೆಸಾ ನಗರದ ಸಮೀಪವಿರುವ ಎಂವಿ ಗೋಲ್ಡನ್ ಲಿಯೋ (MV Golden Leo) ಎಂಬ ಸರಕು ಸಾಗಣೆ ಹಡಗಿನ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಕೇರಳದ ಯುವ ನಾವಿಕ ಅಖಿಲ್ ಜೋಯನ್ ಸೇರಿದಂತೆ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ.

ಕಣ್ಣೀರಲ್ಲಿ ಮುಳುಗಿದ ಸಂಬಂಧಿಗಳು

ಮೃತ ಅಖಿಲ್ ಜೋಯನ್ (26) ಕೇರಳದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ನಿವಾಸಿ. ಕೇವಲ ಮೂರು ತಿಂಗಳ ಹಿಂದೆಯಷ್ಟೇ ಅಖಿಲ್ ಅವರ ನಿಶ್ಚಿತಾರ್ಥ ಅಲೆಪ್ಪಿಯ ಯುವತಿಯೊಂದಿಗೆ ಅದ್ಧೂರಿಯಾಗಿ ನಡೆದಿತ್ತು. ಇನ್ನು ಎರಡು ತಿಂಗಳಲ್ಲಿ ಮದುವೆ ನಿಶ್ಚಯವಾಗಿತ್ತು.

ಮದುವೆಗಾಗಿ ಸಿದ್ಧತೆಗಳು ನಡೆಯುತ್ತಿದ್ದವು, ಆದರೆ ವಿಧಿಯ ಆಟವೇ ಬೇರೆಯಾಗಿತ್ತು. ಒಂದು ತಿಂಗಳ ಹಿಂದೆಯಷ್ಟೇ ಅವರು ರಜೆ ಮುಗಿಸಿ ಮತ್ತೆ ಕೆಲಸಕ್ಕೆ ತೆರಳಿದ್ದರು.

ಅಖಿಲ್ ಅವರ ತಂದೆ ಜೋಯನ್ ಎಲೆಕ್ಟ್ರಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ತಾಯಿ ಸ್ಯಾಲಿ ಇನ್ಶೂರೆನ್ಸ್ ಏಜೆಂಟ್ ಆಗಿದ್ದಾರೆ.

 ಈ ಸಾಮಾನ್ಯ ಕುಟುಂಬಕ್ಕೆ ಅಖಿಲ್ ಏಕೈಕ ಮಗನಾಗಿದ್ದರು. ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಅವರು 19ನೇ ವಯಸ್ಸಿನಲ್ಲೇ ಮರ್ಚೆಂಟ್ ನೇವಿಗೆ ಸೇರಿದ್ದರು.

ಇತ್ತೀಚೆಗಷ್ಟೇ ಒಂದು ಹೊಸ ಮನೆಯನ್ನು ಕೂಡ ಕಟ್ಟಿಸಿದ್ದರು. ಶೀಘ್ರದಲ್ಲೇ ಈ ಕೆಲಸ ಬಿಟ್ಟು ಬೇರೆ ಉತ್ತಮ ಕೆಲಸಕ್ಕೆ ಸೇರುವ ಕನಸು ಅವರದ್ದಾಗಿತ್ತು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಚಾನಕ್ಕಾಗಿ ಮನೆಯಿಂದ ಬೆಳ್ಳಿ ಕಳಶ ನಾಪತ್ತೆ : ಬೇಡಿದ 48 ಗಂಟೆಗಳಲ್ಲಿ ವಾಪಸ್ ಕರೊನಾ ವೈರಸ್ ಸಾವಿರ ವರ್ಷಗಳಾದರೂ ಇರುತ್ತೆ ಭಯ ಪಡುವ ಅಗತ್ಯವಿಲ್ಲ : ಯು. ಟಿ ಖಾದರ್ ಶೀಘ್ರವೇ ಎಸ್ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಹೆಚ್ಚಳ : ಜಿ. ಪರಮೇಶ್ವರ್ ಸಚಿವ ಸ್ಥಾನ ಯಾರಿಗೆ ಅವಕಾಶ ದೊರೆತರೂ ಜಿಲ್ಲೆಗೆ ಅನುಕೂಲ : ಸತೀಶ್ ಜಾರಕಿಹೊಳಿಪ್ರಧಾನಿ ಮೋದಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ರಾಹುಲ್ ಗಾಂಧಿ ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಶೀಘ್ರ ಭಾರತ ತಂಡದ ಆಯ್ಕೆ ಸಾಧ್ಯತೆಭಾರತ ತಂಡಕ್ಕೆ ಎಚ್ಚರಿಕೆ ಗಂಟೆ ಬಾರಿಸಿದ ಜಿಂಬಾಬ್ವೆ ನಾಯಕವಿಂಡೀಸ್-ಕಿವೀಸ್ ೫ ನೇ ಏಕದಿನ ನಾಳೆರಾಜ್ಯವನ್ನ ಬೆಚ್ಚಿ ಬೀಳಿಸುವ ಭೀಕರ ಘಟನೆ : ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಗಂಡ ಆತ್ಮಹತ್ಯೆಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಮೂವರು ಇಂಜಿನಿಯರ್ ಮೇಲೆ ಮಾರಣಾಂತಿಕ ಹಲ್ಲೆ