ವಿಜಯಪುರ: ಹನಿಟ್ರ್ಯಾಪ್ ಮೂಲಕ ಸಹೋದ್ಯೋಗಿಯನ್ನೇ ಕಿಡ್ನ್ಯಾಪ್ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಕಿಡ್ನ್ಯಾಪ್ ಮಾಡಿ ಬರೋಬ್ಬರಿ 12 ಲಕ್ಷ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು ದುರುಳರು.
ಪ್ರಕರಣ ಸಂಬಂಧ ಅಂತರ-ಜಿಲ್ಲಾ ಅಪಹರಣಕಾರರ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ನಗರದ ಕಸ್ತೂರಿ ಕಾಲೋನಿಯ ನಿವಾಸಿ 22 ವರ್ಷದ ಸಾಹಿಲ್ನನ್ನು ಜೂನ್ 18ರಂದು ಕಾಣೆಯಾಗಿದ್ದ. ಯಾರೋ ದುಷ್ಕರ್ಮಿಗಳು ತನ್ನ ಮಗನನ್ನು ಅಪಹರಿಸಿದ್ದಾರೆ ಎಂದು ಮಮ್ತಾಜ್ ಜೂ.19ರಂದು ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಅಪಹರಣಕ್ಕೊಳಗಾದ ಸಾಹಿಲ್ ಮತ್ತು ಆರೋಪಿ ಮಹ್ಮಮದ ರಫೀಕ್ ಇಬ್ಬರೂ ವಿಜಯಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.
ಸಾಹಿಲ್ ಕುಟುಂಬವು ಇತ್ತೀಚೆಗಷ್ಟೇ ತಮಗೆ ಸೇರಿದ 2 ಎಕರೆ ಜಮೀನನ್ನು 26 ಲಕ್ಷ ರೂ.ಗೆ ಮಾರಾಟ ಮಾಡಿತ್ತು. ಸಾಹಿಲ್ ಈ ವಿಷಯವನ್ನು ತನ್ನ ಸಹೋದ್ಯೋಗಿ ಮಹ್ಮಮದ ರಫೀಕ್ ಬಳಿ ಹಂಚಿಕೊಂಡಿದ್ದನು.


