Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯನ್ನು ಬಿಟ್ಟು ನಾನೆಲ್ಲಿ ಹೋಗಲಿ? ನನ್ನ ಜೀವ ಇರುವುದೇ ಬಿಜೆಪಿಯಲ್ಲಿ : ಕೆ. ಎಸ್ ಈಶ್ವರಪ್ಪ 

Advertisement
ಬಳ್ಳಾರಿ: ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಬೆಂಗಳೂರಿನಲ್ಲಿ ನಿನ್ನೆ ಬಿಜೆಪಿ ಕುರುಬ ಸಮಾಜದ ಮುಖಂಡರ ಸಭೆ ನಡೆದಿದೆ. ನನ್ನ ಮೇಲಿನ ಪ್ರೀತಿ, ವಿಶ್ವಾಸದಿಂದ ಅವರು ಮಾತನಾಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ವಾಪಸ್ ಬಿಜೆಪಿ ಸೇರ್ಪಡೆ ಆಗ್ತೀರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಬಿಜೆಪಿಯನ್ನು ಬಿಟ್ಟು ನಾನೆಲ್ಲಿ ಹೋಗಲಿ? ನನ್ನ ಜೀವ ಇರುವುದೇ ಬಿಜೆಪಿಯಲ್ಲಿ ಎಂದು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಕೆಲವು ಹಿರಿಯರು ಚರ್ಚೆ ಮಾಡಿದ್ದಾರೆ ಎಂದು ಗೊತ್ತಾಗಿದೆ. ನೋಡೋಣ, ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಪಕ್ಷದ ಹಿರಿಯ ನಾಯಕರು ಕುಳಿತು ಚರ್ಚೆ ಮಾಡೋಣ ಎಂದು ಹೇಳಿದ್ದಾರೆ ಎಂದರು.

ಈಶ್ವರಪ್ಪ ಅವರನ್ನು ಬಿಜೆಪಿಗೆ ಕರೆ ತರಲು ಹೆಚ್ಚಿನ ಒತ್ತಡವಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಬೇರೆ ಪಕ್ಷಗಳಿಂದಲೂ ಆಫರ್ ಬಂದಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕೂಡ ಕರೆದಿದ್ದರು. ಸಿದ್ದರಾಮಯ್ಯ ಸಂಪುಟದ ಸಚಿವರು ಕೂಡ ನನ್ನನ್ನು ಕರೆದಿದ್ದರು.

ನಾನು, ಯಡಿಯೂರಪ್ಪ, ಅನಂತ್ ಕುಮಾರ್ ಸೇರಿ ಪಕ್ಷ ಕಟ್ಟಿದ್ದೇವೆ. ಅದಕ್ಕಿಂತ ಮೊದಲು ಅನೇಕರು ಪಕ್ಷಕ್ಕಾಗಿ ರಕ್ತ ಸುರಿಸಿದ್ದಾರೆ. ಬಿಜೆಪಿ ಬಿಟ್ಟು ಬೇರೆ ಯಾವ ಪಕ್ಷಕ್ಕೂ ಹೋಗುವುದಿಲ್ಲ ಎಂದು ವಾಪಸ್ ಪಕ್ಷ ಸೇರುವ ಬಗ್ಗೆ ಈಶ್ವರಪ್ಪ ಇಂಗಿತ ವ್ಯಕ್ತಪಡಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ