Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನತ್ರ ಇರುವಂತಹ ದಾಖಲೆಗಳು ರಿಲೀಸ್ ಮಾಡಿದ್ರೆ 8 ಮಂದಿ ಮಂತ್ರಿಗಳು ರಾಜೀನಾಮೆ : ಕುಮಾರಸ್ವಾಮಿ 

Advertisement

ಬೆಂಗಳೂರು : ಸಿದ್ದರಾಮಯ್ಯನವ್ರೇ ನಿಮ್ಮಿಂದ ಸರ್ಟಿಫಿಕೇಟ್ ಬೇಕಿಲ್ಲ. ತಪ್ಪು ಸಾಬೀತಾದರೆ ನಾನೇ ರಾಜೀನಾಮೆ ಕೊಡ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಕೆಂಡಕಾರಿದ್ದಾರೆ.


ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ,ನಾನು ಇಲ್ಲಿಗೆ ಯಾವುದೇ ತಪ್ಪು ಮಾಡಿ ಬಂದಿಲ್ಲ, ಅಧಿಕಾರದಲ್ಲಿ ಇದ್ದಾಗ ಅಧಿಕಾರ ದುರುಪಯೋಗ ಮಾಡಿಕೊಳ್ಳುವ ವ್ಯಕ್ತಿ ನಾನಲ್ಲ.


ನಿಮ್ಮದು ಬರೀ ದ್ವೇಷದ ರಾಜಕರಣ. ನಿಮ್ಮ ಸಂಪುಟದಲ್ಲಿ ದರೋಡೆಕೊರರೇ ತುಂಬಿದ್ದಾರೆ.ನೀವು ಪಾರದರ್ಶಕ ಆಡಳಿತ ಕೊಡುವುದರಲ್ಲಿ ವಿಫಲರಾಗಿದ್ದೀರಿ ಎಂದು ಟೀಕಿಸಿದರು.


ಗಂಗೇನಹಳ್ಳಿ ಡಿನೋಟಿಫಿಕೇಷನ್ ನಲ್ಲಿ ತಪ್ಪೇ ಮಾಡಿಲ್ಲ. ಯಾವ ಪ್ರಕರಣದಲ್ಲೂ ನನ್ನನ್ನು ಸಿಲುಕಿಸಲಾಗಲ್ಲ. ನಂಗೆ ಭಯವೇ ಇಲ್ಲ. ಕೊತ್ವಾಲನ ಜತೆಗಿದ್ದವರು ಆಡಳಿತ ನಡೆಸ್ತಿದ್ದಾರೆ . ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆಡಳಿತಯಂತ್ರ ಸಂಪೂರ್ಣ ಕುಸಿದಿದೆ. ದ್ವೇಷ ರಾಜಕಾರಣಕ್ಕೆ ಹೆದರಲ್ಲ. ಯಾವುದೇ ತನಿಖೆ ನಡೆಸಿದರೂ ಏನೂ ಮಾಡೋಕೆ ಆಗೋದಿಲ್ಲ ಅಂತ ಹೇಳಿದ್ದಾರೆ.


ಹಿಟ್ ಅಂಡ್ ರನ್ ಮಾಡೋದಿಲ್ಲ . ದೇವೇಗೌಡ್ರ ಕುಟುಂಬ ಕೆದಕಿದ್ರೆ, ಏನಾಗುತ್ತೆ ಕಾದು ನೋಡಿ. ನನ್ನತ್ರ ಇರುವಂತಹ ದಾಖಲೆಗಳು ರಿಲೀಸ್ ಮಾಡಿದ್ರೆ 8 ಮಂದಿ ಮಂತ್ರಿಗಳು ರಾಜೀನಾಮೆ ನೀಡುತ್ತಾರೆ ಎಂದು ಭವಿಷ್ಯ ನುಡಿದ್ರು. ಸಿದ್ದರಾಮಯ್ಯ ಹೆದರಲ್ಲ ಅಂತಿದ್ದಾರೆ.


ದೇವೇಗೌಡ್ರ ಕಣ್ಣಲ್ಲಿ ನೀರು ಹಾಕಿಸಿದ್ರೆ ಒಳ್ಳೆದಾಗಲ್ಲ. ಈ ಸರ್ಕಾರ ಭಸ್ಮ ಆಗುವ ಕಾಲ ದೂರ ಇಲ್ಲ ಎಂದು ಕಿಡಿಕಾರಿದ್ರು. ಸಿದ್ದರಾಮಯ್ಯ ಗೆ ರಾತ್ರಿ ನಿದ್ದೆ ಬರ್ತಿಲ್ಲ. 2 ಗಂಟೆಗೆ ಎದ್ದು ಡಾಕ್ಟರ್ ಕರೆಸಿ ಮಾತಾಡಿದ್ದಾರೆ. ರಾತ್ರಿ ಎದ್ದವರು ಮಲಗಲು ಹೆಣಗಾಡುತ್ತಿದ್ದಾರೆ. ಇಷ್ಟಾದರೂ ನಾನು ಹೆದರಲ್ಲ,ನಾನು ಹೆದರಲ್ಲ ಎಂದು ಹೇಳಿಕೆ ನೀಡಿ ತಪ್ಪು ಮುಚ್ಚಿಕೊಳ್ಳುವ ಪ್ರಯತ್ನ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ