
ಕಾಮಗಾರಿಯ ವಿವರಗಳು: ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿರುವ ಸಚಿವರು, ಕುವೆಂಪು ನಗರದ ಪ್ರಮುಖ ರಸ್ತೆಗಳ ನವೀಕರಣಕ್ಕೆ ಮುಂದಾಗಿದ್ದಾರೆ. ಇಂದಿನ ಯೋಜನೆಯಲ್ಲಿ ಪ್ರಮುಖವಾಗಿ: 3 ಮುಖ್ಯ ರಸ್ತೆಗಳ ಡಾಂಬರೀಕರಣ.
2 ಉಪ ರಸ್ತೆಗಳ ಡಾಂಬರೀಕರಣ ಮತ್ತು ಪೇವರ್ಸ್ ಅಳವಡಿಕೆ. ಗುಣಮಟ್ಟಕ್ಕೆ ಆದ್ಯತೆ – ಸಚಿವರ ಸೂಚನೆ: ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಅವರು, "ಜನರ ತೆರಿಗೆ ಹಣ ಸದುಪಯೋಗವಾಗಬೇಕು. ಈ ರಸ್ತೆ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು. ಸಾರ್ವಜನಿಕರಿಗೆ ಶೀಘ್ರವಾಗಿ ಅನುಕೂಲ ಮಾಡಿಕೊಡಬೇಕು," ಎಂದು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. "ಕ್ಷೇತ್ರದ ಪ್ರತಿಯೊಂದು ಬಡಾವಣೆಗೂ ಮೂಲಸೌಕರ್ಯ ಒದಗಿಸುವುದು ನಮ್ಮ ಗುರಿ. ಕುವೆಂಪು ನಗರದ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿದ್ದ ಈ ರಸ್ತೆ ಕಾಮಗಾರಿ ಇಂದು ಆರಂಭಗೊಂಡಿರುವುದು ಸಂತಸ ತಂದಿದೆ.

ವರದಿ : ಮಹಾಂತೇಶ್ ಎಸ್ ಹುಲಿಕಟ್ಟಿ

