Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಕ್ಷ್ಮೀ ಹೆಬ್ಬಾಳಕರ್ ಗೆ ಎರಡನೇ ಹಂತದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ : ಚನ್ನರಾಜ ಹಟ್ಟಿಹೊಳಿ

Advertisement

ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮೊದಲ ಹಂತದ ಸಚಿವ ಸಂಪುಟ ರಚನೆಯಾಗಿದೆ. ಆದರೆ ಬಹುತೇಕ ಸಚಿವ ಸ್ಥಾನಗಳು ಇನ್ನೂ ಭರ್ತಿಯಾಗದೇ ಖಾಲಿ ಇವೆ. 

ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ಲಾಭಿ ಆರಂಭಿಸಿದ್ದಾರೆ. ಮಾಜಿ ಸಚಿವರು ಮತ್ತೊಮ್ಮೆ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳಲು ಕಸರತ್ತು ನದೆಸಿದ್ದರೆ, ಹೊಸ ಶಾಸಕರು ಮೊದಲ ಬಾರಿ ಮಂತ್ರಿಯಾಗಬೇಕೆಂದು ಹವಣಿಸುತ್ತಿದ್ದಾರೆ.

ಈ ನಡುವೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಕೂಡ ಮತ್ತೊಮ್ಮೆ ಸಚಿವ ಸಂಪುಟ ಸೇರಲು ಕಸರತ್ತು ನಡೆಸಿದ್ದಾರೆ.

ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಎರಡನೇ ಹಂತದಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಸಹೋದರ, ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಕಳೆದ 27 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಕ್ಷೇತ್ರದ ಜನರ ಸೇವೆಗಾಗಿ ಅವರಿಗೆ ಮತ್ತೊಮ್ಮೆ ಅವಕಾಶ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಎರಡನೇ ಹಂತದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಮಂತ್ರಿ ಸ್ಥಾನ ಸಿಗಲಿದೆ. ಮಹಿಳಾ ನಾಯಕತ್ವ ಬೆಳೆಯಲು ಲಕ್ಷ್ಮ್ನೀ ಹೆಬ್ಬಾಳಕರ್ ಅವರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ಹೇಳಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST