Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ರೈತರ ಜಮೀನು ಲೂಟಿ

Advertisement
ಬೆಳಗಾವಿಯಲ್ಲಿ ಅನ್ನದಾತನಿಗೆ ಬಿಗ್ ಶಾಕ್

​2 ವರ್ಷದ ಅಗ್ರಿಮೆಂಟ್... 20 ವರ್ಷಕ್ಕೆ ಎಡಿಟ್

​ಜಯ ಕರ್ನಾಟಕ ಸಂಘಟನೆಯಿಂದ ಭಾರಿ ಸ್ಫೋಟ

ಬೆಳಗಾವಿ :ಜಿಲ್ಲೆಯ ಖಾನಾಪುರದಲ್ಲಿ ಅನ್ನದಾತನಿಗೆ ನಂಬಿಸಿ ಕುತ್ತಿಗೆ ಕುಯ್ಯುವ ಕೆಲಸವಾಗಿದೆ! ಮುಗ್ಧ ರೈತರ ಅನಕ್ಷರತೆಯನ್ನೇ ಬಂಡವಾಳ ಮಾಡಿಕೊಂಡ ಖದೀಮರು, ಅವರ ಬದುಕಿನ ಆಧಾರವಾಗಿದ್ದ ಜಮೀನನ್ನೇ ಕಬಳಿಸಲು ಸ್ಕೆಚ್ ಹಾಕಿದ್ದಾರೆ. ಕೇವಲ 2 ವರ್ಷಕ್ಕೆ ಮಾಡಿಕೊಂಡಿದ್ದ ಕರಾರು ಪತ್ರ ಈಗ 20 ವರ್ಷಕ್ಕೆ ಬದಲಾಗಿದೆ! ಅಷ್ಟಕ್ಕೂ ಅಲ್ಲಿ ನಡೆದಿದ್ದೇನು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್."
​ ತೀರ್ಥಕುಂಡೆ ಗ್ರಾಮದ ಜಮೀನು, ಸಂತ್ರಸ್ತ ರೈತರು ಮತ್ತು ಜಯ ಕರ್ನಾಟಕ ಸಂಘಟನೆಯ ಪ್ರತಿಭಟನೆ/ಮನವಿ ಸಲ್ಲಿಸಿದರು "ಇವರು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ತೀರ್ಥಕುಂಡೆ ಗ್ರಾಮದ ತಾತೋಬಾ ವಿಠಲ್ ಖಾಮಕರ್ ಮತ್ತು ತುಕಾರಾಮ್ ವಿಠಲ್ ಖಾಮಕರ್. ಈ ರೈತರು ತಮ್ಮ 3 ಎಕರೆ ಜಮೀನನ್ನು ರಾಘವೇಂದ್ರ ರಮೇಶ್ ನಾಯ್ ಎಂಬ ವ್ಯಕ್ತಿಗೆ 15 ಲಕ್ಷ ರೂಪಾಯಿ ಬದಲಿಗೆ ಕೇವಲ 2 ವರ್ಷಗಳ ಕಾಲ ಕರಾರು ಮಾಡಿಕೊಟ್ಟಿದ್ದರು. ಆದರೆ ಇಂದು ಅದೇ ಜಮೀನು ಅವರ ಕೈತಪ್ಪಿ ಹೋಗುವ ಆತಂಕ ಎದುರಾಗಿದೆ. ಏಕೆಂದರೆ, ಆ 2 ವರ್ಷದ ಅವಧಿಯನ್ನು ಆರೋಪಿ ರಾಘವೇಂದ್ರ ಎಂಬಾತ ದಾಖಲೆಗಳಲ್ಲಿ ಅಕ್ರಮವಾಗಿ ತಿದ್ದುಪಡಿ ಮಾಡಿ ಬರೋಬ್ಬರಿ 20 ವರ್ಷ ಎಂದು ಬದಲಿಸಿಕೊಂಡಿದ್ದಾನೆ!"

​ವಂಚನೆಯ ಜಾಲ 2 ವರ್ಷದ ಕರಾರು ಪತ್ರ 20 ವರ್ಷಕ್ಕೆ ಎಡಿಟ್!
​ಹೆಚ್ಚುವರಿ ಜಮೀನು ಕಬಳಿಕೆ: ಒಪ್ಪಂದಕ್ಕಿಂತ ಹೆಚ್ಚಿನ ಭೂಮಿ ಅಕ್ರಮ ವಶ.
​ರಾಜಕೀಯ ಪ್ರಭಾವ: ಪೊಲೀಸ್ ದೂರು ನೀಡಿದರೂ ಕ್ರಮ ಕೈಗೊಳ್ಳದ ಖಾನಾಪುರ ಪೊಲೀಸ್ ಇಲಾಖೆ.
​ ರೈತರ ಮುಗ್ಧತೆಯನ್ನು ಅಸ್ತ್ರವಾಗಿಸಿಕೊಂಡು ಈ ವಂಚನೆ ಮಾಡಲಾಗಿದೆ ಎಂದು ಜಯ ಕರ್ನಾಟಕ ಸಂಘಟನೆ ಗಂಭೀರ ಆರೋಪ ಮಾಡಿದೆ. ಕೇವಲ ಸಮಯದ ಬದಲಾವಣೆ ಮಾತ್ರವಲ್ಲ, ಒಪ್ಪಂದದಲ್ಲಿ ಇರುವುದಕ್ಕಿಂತ ಹೆಚ್ಚಿನ ಜಮೀನನ್ನು ಅಕ್ರಮವಾಗಿ ಕಬಳಿಸಲಾಗಿದೆ ಎಂಬುದು ಸಂಘಟನೆಯ ವಾದ. ಈ ಬಗ್ಗೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರೂ ಸಹ ಆರೋಪಿಯ ರಾಜಕೀಯ ಪ್ರಭಾವದಿಂದಾಗಿ ಪೊಲೀಸರು ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ."
​ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿ

ರೈತರಿಗೆ ಅನ್ಯಾಯವಾದರೆ ನಾವು ಸುಮ್ಮನಿರುವುದಿಲ್ಲ. ಹಣದ ಮದ ಮತ್ತು ರಾಜಕೀಯ ಪವರ್ ಬಳಸಿ ರೈತರ ಹೊಟ್ಟೆ ಮೇಲೆ ಹೊಡೆಯುವ ಕೆಲಸವಾಗುತ್ತಿದೆ. ತಕ್ಷಣವೇ ತನಿಖೆಯಾಗಬೇಕು, ಇಲ್ಲವಾದರೆ ಉಗ್ರ ಪ್ರತಿಭಟನೆ ಮಾಡಲಾಗುವುದು."

ವರದಿ : ಮಹಾಂತೇಶ್ ಎಸ್ ಹುಲಿಕಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್ ಬಿಜೆಪಿ ವಿರುದ್ಧ ಸೆಡ್ಡು : ಇಂದು 23 ರಾಜಕೀಯ ಪಕ್ಷಗಳಿಂದ ಇಂಡಿಯಾ ಮೈತ್ರಿಕೂಟದ ಸಭೆ ರೈತರಿಗೆ ವ್ಯಕ್ತಿಯಿಂದ ಕಳಪೆ ಬೀಜ ಮಾರಾಟ ಜಮೀರ್ ಅಹ್ಮದ್ ಖಾನ್ ವರಿಗೆ ಉಪಮುಖ್ಯಮಂತ್ರಿ, ಶಾಸಕ ಎಸ್.ಎನ್. ಸುಬ್ಬಾರೆಡ್ಡಿರವರಿಗೆ ಸಚಿವ ಸ್ಥಾನ ನೀಡುವಂತೆ  ಒತ್ತಾಯಮುನಿಯಪ್ಪಗೆ ಸಮಾಜ ಕಲ್ಯಾಣ ಇಲಾಖೆ ಖಾತೆಗೆ ಒತ್ತಾಯಿಸಿ ಪ್ರತಿಭಟನೆ