Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ರೈತರ ಜಮೀನು ಲೂಟಿ

Advertisement
ಬೆಳಗಾವಿಯಲ್ಲಿ ಅನ್ನದಾತನಿಗೆ ಬಿಗ್ ಶಾಕ್

​2 ವರ್ಷದ ಅಗ್ರಿಮೆಂಟ್... 20 ವರ್ಷಕ್ಕೆ ಎಡಿಟ್

​ಜಯ ಕರ್ನಾಟಕ ಸಂಘಟನೆಯಿಂದ ಭಾರಿ ಸ್ಫೋಟ

ಬೆಳಗಾವಿ :ಜಿಲ್ಲೆಯ ಖಾನಾಪುರದಲ್ಲಿ ಅನ್ನದಾತನಿಗೆ ನಂಬಿಸಿ ಕುತ್ತಿಗೆ ಕುಯ್ಯುವ ಕೆಲಸವಾಗಿದೆ! ಮುಗ್ಧ ರೈತರ ಅನಕ್ಷರತೆಯನ್ನೇ ಬಂಡವಾಳ ಮಾಡಿಕೊಂಡ ಖದೀಮರು, ಅವರ ಬದುಕಿನ ಆಧಾರವಾಗಿದ್ದ ಜಮೀನನ್ನೇ ಕಬಳಿಸಲು ಸ್ಕೆಚ್ ಹಾಕಿದ್ದಾರೆ. ಕೇವಲ 2 ವರ್ಷಕ್ಕೆ ಮಾಡಿಕೊಂಡಿದ್ದ ಕರಾರು ಪತ್ರ ಈಗ 20 ವರ್ಷಕ್ಕೆ ಬದಲಾಗಿದೆ! ಅಷ್ಟಕ್ಕೂ ಅಲ್ಲಿ ನಡೆದಿದ್ದೇನು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್."
​ ತೀರ್ಥಕುಂಡೆ ಗ್ರಾಮದ ಜಮೀನು, ಸಂತ್ರಸ್ತ ರೈತರು ಮತ್ತು ಜಯ ಕರ್ನಾಟಕ ಸಂಘಟನೆಯ ಪ್ರತಿಭಟನೆ/ಮನವಿ ಸಲ್ಲಿಸಿದರು "ಇವರು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ತೀರ್ಥಕುಂಡೆ ಗ್ರಾಮದ ತಾತೋಬಾ ವಿಠಲ್ ಖಾಮಕರ್ ಮತ್ತು ತುಕಾರಾಮ್ ವಿಠಲ್ ಖಾಮಕರ್. ಈ ರೈತರು ತಮ್ಮ 3 ಎಕರೆ ಜಮೀನನ್ನು ರಾಘವೇಂದ್ರ ರಮೇಶ್ ನಾಯ್ ಎಂಬ ವ್ಯಕ್ತಿಗೆ 15 ಲಕ್ಷ ರೂಪಾಯಿ ಬದಲಿಗೆ ಕೇವಲ 2 ವರ್ಷಗಳ ಕಾಲ ಕರಾರು ಮಾಡಿಕೊಟ್ಟಿದ್ದರು. ಆದರೆ ಇಂದು ಅದೇ ಜಮೀನು ಅವರ ಕೈತಪ್ಪಿ ಹೋಗುವ ಆತಂಕ ಎದುರಾಗಿದೆ. ಏಕೆಂದರೆ, ಆ 2 ವರ್ಷದ ಅವಧಿಯನ್ನು ಆರೋಪಿ ರಾಘವೇಂದ್ರ ಎಂಬಾತ ದಾಖಲೆಗಳಲ್ಲಿ ಅಕ್ರಮವಾಗಿ ತಿದ್ದುಪಡಿ ಮಾಡಿ ಬರೋಬ್ಬರಿ 20 ವರ್ಷ ಎಂದು ಬದಲಿಸಿಕೊಂಡಿದ್ದಾನೆ!"

​ವಂಚನೆಯ ಜಾಲ 2 ವರ್ಷದ ಕರಾರು ಪತ್ರ 20 ವರ್ಷಕ್ಕೆ ಎಡಿಟ್!
​ಹೆಚ್ಚುವರಿ ಜಮೀನು ಕಬಳಿಕೆ: ಒಪ್ಪಂದಕ್ಕಿಂತ ಹೆಚ್ಚಿನ ಭೂಮಿ ಅಕ್ರಮ ವಶ.
​ರಾಜಕೀಯ ಪ್ರಭಾವ: ಪೊಲೀಸ್ ದೂರು ನೀಡಿದರೂ ಕ್ರಮ ಕೈಗೊಳ್ಳದ ಖಾನಾಪುರ ಪೊಲೀಸ್ ಇಲಾಖೆ.
​ ರೈತರ ಮುಗ್ಧತೆಯನ್ನು ಅಸ್ತ್ರವಾಗಿಸಿಕೊಂಡು ಈ ವಂಚನೆ ಮಾಡಲಾಗಿದೆ ಎಂದು ಜಯ ಕರ್ನಾಟಕ ಸಂಘಟನೆ ಗಂಭೀರ ಆರೋಪ ಮಾಡಿದೆ. ಕೇವಲ ಸಮಯದ ಬದಲಾವಣೆ ಮಾತ್ರವಲ್ಲ, ಒಪ್ಪಂದದಲ್ಲಿ ಇರುವುದಕ್ಕಿಂತ ಹೆಚ್ಚಿನ ಜಮೀನನ್ನು ಅಕ್ರಮವಾಗಿ ಕಬಳಿಸಲಾಗಿದೆ ಎಂಬುದು ಸಂಘಟನೆಯ ವಾದ. ಈ ಬಗ್ಗೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರೂ ಸಹ ಆರೋಪಿಯ ರಾಜಕೀಯ ಪ್ರಭಾವದಿಂದಾಗಿ ಪೊಲೀಸರು ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ."
​ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿ

ರೈತರಿಗೆ ಅನ್ಯಾಯವಾದರೆ ನಾವು ಸುಮ್ಮನಿರುವುದಿಲ್ಲ. ಹಣದ ಮದ ಮತ್ತು ರಾಜಕೀಯ ಪವರ್ ಬಳಸಿ ರೈತರ ಹೊಟ್ಟೆ ಮೇಲೆ ಹೊಡೆಯುವ ಕೆಲಸವಾಗುತ್ತಿದೆ. ತಕ್ಷಣವೇ ತನಿಖೆಯಾಗಬೇಕು, ಇಲ್ಲವಾದರೆ ಉಗ್ರ ಪ್ರತಿಭಟನೆ ಮಾಡಲಾಗುವುದು."

ವರದಿ : ಮಹಾಂತೇಶ್ ಎಸ್ ಹುಲಿಕಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ