Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶುದ್ಧ ಕುಡಿವ ನೀರು ಸರಬರಾಜು ಚಾಲನಾ ಕಾರ್ಯಕ್ರಮಕ್ಕೆ ಶಾಸಕ ಎನ್ ವೈ ಗೋಪಾಲಕೃಷ್ಣ ಚಾಲನೆ

Advertisement
ಮೊಳಕಾಲ್ಮುರು:  ಪಟ್ಟಣದ ಹಾನಗಲ್‌ ರಸ್ತೆಯಲ್ಲಿ ತುಂಗಭದ್ರ ಜಲಾಶಯದ ಹಿನ್ನೀರಿನಿಂದ ಪಟ್ಟಣಕ್ಕೆ ಶುದ್ಧ ಕುಡಿವ ನೀರು ಸರಬರಾಜು ಮಾಡುವ ಮಾರ್ಗದ ಪ್ರಾಯೋಗಿಕ ಚಾಲನಾ ಕಾರ್ಯಕ್ರಮಕ್ಕೆ ಶಾಸಕ ಎನ್ ವೈ ಗೋಪಾಲಕೃಷ್ಣ ಚಾಲನೆ ನೀಡಿದರು.



ಈ ವೇಳೆ ಮಾತನಾಡಿದ ಅವರು,ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೆರೆಸುವುದು ತರವಲ್ಲ. ಮೊದಲಿನಿಂದಲೂ ಹಿಂದುಳಿದಿರುವ ಮೊಳಕಾಲ್ಕುರು ಪಟ್ಟಣದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಸಹಜವಾಗಿಯೇ ನೀರಿನ ಅವಶ್ಯಕತೆಯೂ ಹೆಚ್ಚಾಗಿದೆ. ಈಗ ಸರಬರಾಜು ಮಾಡುತ್ತಿರುವ ತುಂಗಭದ್ರಾ ಹಿನ್ನೀರಿನ ಶುದ್ಧ ಕುಡಿವ ನೀರನ್ನು ಜನರು ಅಗತ್ಯಕ್ಕೆ ಅನುಗುಣವಾಗಿ ಬಳಸಿಕೊಳ್ಳಬೇಕು.

ಹಕೂಡ್ಲಿಗಿ ತಾಲೂಕಿನ ಗುಡೇಕೋಟಿ, ಮೊಳಕಾಲ್ಕುರು ಪಟ್ಟಣ, ಬಿ.ಜಿ.ಕೆರೆ ಹಾಗೂ ರಾಂಪುರ ಭಾಗಗಳಲ್ಲಿಯೂ ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳು ಉದ್ಭವವಾಗಿದ್ದು, ಈ ಸಮಸ್ಯೆಗಳನ್ನು ಸ್ಥಳೀಯ ಮುಖಂಡರುಗಳ ಜೊತೆ ಚರ್ಚಿಸಿ ಬಗೆಹರಿಸಲು ಶ್ರಮಿಸಿದ್ದೆ ಎಂದರು.

ಸ್ಥಳದಲ್ಲಿ ತಹಸೀಲ್ದಾ‌ರ್ ಟಿ.ಜಗದೀಶ್, ಪಪಂ ಅಧ್ಯಕ್ಷೆ ಲೀಲಾವತಿ, ಮುಖ್ಯಾಧಿಕಾರಿ ಎಚ್.ಡಿ.ಲಿಂಗರಾಜ್, ಸದಸ್ಯರಾದ ಶುಭಾ, ರೂಪಾ, ಪದ್ಮಾವತಿ, ಎಸ್.ಖಾದರ್, ಪಶು ಸಂಗೋಪನಾ ಇಲಾಖೆ ಎಇಇ ಡಾ.ಎಚ್.ರಂಗಪ್ಪ, ಜಿಪಂ ಉಪ ವಿಭಾಗದ ಎಇಇ ಲಿಂಗರಾಜ್ ಸೇರಿದಂತೆ ಹಲವರಿದ್ದರು.

ವರದಿ: ಪಿಎಂ ಗಂಗಾಧರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ