Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶತ್ರು ರಾಷ್ಟ್ರದ ವಿರುದ್ಧ ಯುದ್ಧ ಮಾಡಲೇಬೇಕು: ಶಾಸಕ ಎನ್ ವೈ ಗೋಪಾಲಕೃಷ್ಣ

Advertisement
                                 ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರ ನೀಡುವ ಸಮಯ ಬಂದಿದೆ

ಮೊಳಕಾಲ್ಮುರು: ಪಹಾಲ್ಗಮ್ ದಾಳಿ ಖಂಡಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ ನೇತೃತ್ವದಲ್ಲಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಸಂಜೆ ಕಾಂಗ್ರೆಸ್ ಪಕ್ಷದಿಂದ ಮೌನ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಭಯೋತ್ಪಕರ ದಾಳಿಗೆ ಬಲಿಯಾದ ಪ್ರವಾಸಿಗ ಹುತಾತ್ಮರನ್ನು ಸ್ಮರಿಸಿ ಮೇಣದ ಬತ್ತಿ ಹಿಡಿದು ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ವೇಳೆ ಶಾಸಕ ಎನ್ ವೈ ಗೋಪಾಲಕೃಷ್ಣ ಮಾತನಾಡಿ, ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಅತ್ಯಂತ ಖಂಡನೀಯ.ಉಗ್ರರ ಈ ದಾಳಿಗೆ ನಾವು ಪ್ರತ್ಯುತ್ತರ ನೀಡಲೇಬೇಕಾದ ಸಮಯ ಒದಗಿ ಬಂದಿದೆ,ನಾವೇನು ಅಶಕ್ತರಲ್ಲ ನಾವು ಶಕ್ತಿವಂತರು.ಉಗ್ರರು ಆಯುಧಗಳಿಂದ ದಾಳಿ ನಡೆಸಿದ್ದು ಈ ಆಯುಧಗಳಿಂದಲೇ ನಾವು ಪ್ರತಿಕಾರ ತೀರಿಕೊಳ್ಳುವ ಸಮಯ ಬಂದಿದೆ. ಶತ್ರು ರಾಷ್ಟ್ರದ ವಿರುದ್ಧ ಯುದ್ಧ ಮಾಡಲೇಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಒತ್ತಾಯ ಮಾಡುತ್ತಿದ್ದೇವೆ.

ಭಾರತ ದೇಶ ಅತ್ಯಂತ ಶಾಂತಿಯುತ ದೇಶ,ನಮಗೆ ಎಂದಿಗೂ ಕೂಡ ಅಕ್ರಮಣಕಾರಿ ನೀತಿ ಬೇರೆ ದೇಶದಲ್ಲಿ ಶಾಂತಿ ಕದಡುವ ಕೆಲಸ ನಾವು ಮಾಡುವುದಿಲ್ಲ.ನಮ್ಮದು ಶಾಂತಿ ಮತ್ತು ಸಹಬಾಳ್ವೆಗೆ ಹೆಸರಾದ ದೇಶ. ದೇಶದ ಗಡಿ ಭಾಗಗಳಿಂದ ಕಳ್ಳತನದ ಮಾರ್ಗಗಳಿಂದ ನುಸುಳಿ ಬರುವ ಉಗ್ರಗಾಮಿಗಳು ಭಾರತದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಲೇ ಇದ್ದಾರೆ, ಇಂತಹ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಉಗ್ರಗಾಮಿಗಳನ್ನು ಹತ್ತಿಕ್ಕುವ ಕೆಲಸವಾಗಬೇಕು ಇಂತಹ ಸಂಕಷ್ಟದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು.

ಯುದ್ಧ ಮಾಡೋಕೆ ಬಂದರೆ ಎಂತಹ ಶತ್ರು ದೇಶವೆನ್ನೆ ಸದೆಬಡಿಯುವ ಶಕ್ತಿ ಹೊಂದಿದ್ದೇವೆ ಯಾವ ಕಾರಣಕ್ಕೂ ಸೋಲುವ ಪ್ರಮೇಯ ಬರುವುದಿಲ್ಲ ಹಾಗಾಗಿ ಯುದ್ಧವೊಂದೇ ಶತ್ರು ದೇಶವನ್ನು ಸದೆಬಡಿಯಲು ಇರುವ ಮಾರ್ಗ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್