Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖಿಳೇಗಾಂವ ಏತ ನೀರಾವರಿ ಯೋಜನೆಯ ಎರಡು ಮೋಟಾರ್ ಗಳಿಗೆ ಶಾಸಕ ರಾಜು ಕಾಗೆ ಚಾಲನೆ

Advertisement
ಐನಾಪುರ:ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯ ಪ್ರಥಮ ಹಂತದ ಎರಡು ಮೋಟಾರಗಳಿಗೆ ಚಾಲನೆ ನೀಡುವುದರಿಂದ ಸುಮಾರು 15 ಸಾವೀರ ಹೆಕ್ಟೇರ್ ಅಥವಾ 40 ಸಾವೀರ ಎಕರೆ ಭೂಮಿ ನೀರಾವರಿಗೊಳಪಡಲಿದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಅವರು ಗುರು ವಾರ ಐನಾಪುರದಲ್ಲಿರುವ ಕೃಷ್ಣಾನದಿಯ ಬಸವೇಶ್ವರ ಏತ ನೀರಾವರಿ ಯೋಜನೆಯ ಕಾಲುವೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ನಂತರ ಬೃಹತ್ ಜಾಕಲವೆಲ್ಲನಲ್ಲಿರುವ ಮೋಟಾರುಗಳನ್ನು ಬಟನ್ ಒತ್ತುವ ಮೂಲಕ ಚಾಲನೆ ನೀಡಿ ಮಾತನಾಡುತ್ತಿದ್ದರು.



ಒಟ್ಟು 1300 ಕೋಟಿ ವೆಚ್ಚದ ಈ ಯೋಜನೆಗೆ ಈಗಾಗಲೇ ಸುಮಾರು 1200 ಕೋಟಿ ಹಣ ಬಿಡುಗಡೆಯಾಗಿದ್ದು, ಇನ್ನೂ 100 ರಿಂದ 200 ಕೋಟಿ ರೂ.ಹಣ ಬಿಡುಗಡೆಯಾಗಬೇಕು ಆಗ ಮಾತ್ರ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದ ಅವರು ಈ ಯೋಜನೆ ಪೂರ್ಣಗೊಂಡ ನಂತರ ಅತ್ಯಂತ ಬರಗಾಲ ಪೀಡಿತ ಸುಮಾರು 25 ರಿಂದ 30 ಗ್ರಾಮಗಳ 27460 ಹೆಕ್ಟೇರ ಅಥವಾ 65 ರಿಂದ 70 ಸಾವೀರ ಎಕರೆ ಭೂಮಿ‌ ನೀರಾವರಿಗೊಳಪಡಲಿದೆ ಎಂದು ಹೇಳಿದರು.

ಈ ಯೋಜನೆಗೆ 2017 ರಲ್ಲಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಈಗಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಯೋಜನೆ ಈಗಾಗಲೇ ಮುಕ್ತಾಯಗೊಳ್ಳಬೇಕಿತ್ತು ಆದರೆ ಅನುದಾನ ಬಿಡುಗಡೆಯಲ್ಲಿ ವಿಳಂಬ, ಗುತ್ತಿಗೆದಾರರಿಂದ ಅಡತಡೆ ಸೇರಿದಂತೆ ಅನೇಕ ಅಡಚಣೆಗಳು ಬಂದ ಪರಿಣಾಮ ಈ ಯೋಜನೆ ಅನುಷ್ಠಾನಕ್ಕೆ ವಿಳಂಬವಾಗಿದೆ ಎಂದ ಅವರು ಕೆಲವೇ ತಿಂಗಳಲ್ಲಿಯೇ ಈ ಯೋಜನೆಗೆ ಬೇಕಾಗುವ ಅನುದಾನ ಬಿಡುಗಡೆಯಾಗಿ ಯೋಜನೆ ಪೂರ್ಣಗೊಳ್ಳಲಿದೆ ಎಂದರು.



ಈ ಸಂದರ್ಭದಲ್ಲಿ ನೀರಾವರಿ ನಿಗಮದ ಸಿ.ಇ ನಾಗರಾಜ ಬಿ.ಎ, ಕಾ.ಇ. ಪ್ರವೀಣ ಹುಣಸಿಕಟ್ಟಿ, ಸ.ಕಾ.ಇ ಪ್ರಶಾಂತ ಪೊತದಾರ, ಸಹಾಯಕ ಅಭಿಯಂತರ ಬಸವರಾಜ ಗಲಗಲಿ, ಗಾಯತ್ರಿ ಕನ್ಸಟ್ರಕ್ಷನ್ಸನ ಎಸ್.ಜೆ.ಎಮ್. ಎಮ್.ವ್ಹಿ.ಶೇಖರ, ಜಿ.ಎಮ್. ನಾಗೇಶ ಕೆ. ಧುರೀಣರಾದ ಘೂಳಪ್ಪ ಜತ್ತಿ, ದಿಗ್ವಿಜಯ ಪವಾರ ದೇಸಾಯಿ, ಶಿವಾನಂದ ಗೊಲಭಾವಿ, ಅಶೋಕ ಕೌಲಗುಡ್ಡ, ಕುಮಾರ ಪಾಟೀಲ, ಅರುಣ ಗಾಣಿಗೇರ, ಪ್ರಕಾಶ ಕೊರಬು, ವಿಶ್ವನಾಥ ನಾಮದಾರ, ಅರವಿಂದ ಕಾರ್ಚಿ, ಚಂದ್ರಕಾಂತ ಇಮ್ಮಡಿ ಸೇರಿದಂತೆ ಇತರರು ಇದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ