Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ ಹೆಚ್ ಮುನಿಯಪ್ಪ ಅವರಿಗೆ ಎಸ್ ಸಿ ಕ್ಯಾಟೆಗರಿಯಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಲಿ:ರಾಮು ಕಣೇಕಲ್

Advertisement

ಸೇಡಂ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೆ ಹೆಚ್ ಮುನಿಯಪ್ಪ ಅವರಿಗೆ ಎಸ್ ಸಿ ಕ್ಯಾಟೆಗರಿಯಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಲೆಂದು ಸೇಡಂ ಮತಕ್ಷೇತ್ರದ ಮಾದಿಗ ಸಮಾಜದ ಯುವ ಮುಖಂಡರಾದ ರಾಮು ಕಣೇಕಲ್ ಅವರು ಮನವಿ ಮಾಡಿದರು. 

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ಕೆ ಹೆಚ್ ಮುನಿಯಪ್ಪಯ ಅವರು ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತ ಏಳು ಬಾರಿ (1991 ರಿಂದ 2019ರವರೆಗೆ) ಸಂಸದರಾಗಿ ಆಯ್ಕೆಯಾಗುವ ಮೂಲಕ ದಾಖಲೆ ನಿರ್ಮಿಸಿದರೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿ (ಕೇಂದ್ರ ರೈಲ್ವೆಯ ರಾಜ್ಯ ಸಚಿವರು ಮತ್ತು ಆಹಾರ ಸಂಸ್ಕರಣಾ ಕೈಗಾರಿಕಾ ಸಚಿವರು) ಕಾರ್ಯನಿರ್ವಹಿಸಿದರೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾಗಿದ್ದಾರೆ. 

ಕೆ. ಎಚ್. ಮುನಿಯಪ್ಪನವರು ಕರ್ನಾಟಕದ ದಲಿತ ಸಮುದಾಯದ ಪ್ರಮುಖ ನಾಯಕರಾಗಿದ್ದು, ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ.

ಸಾಮಾಜಿಕ ನ್ಯಾಯದ ಪರವಾಗಿ ಧ್ವನಿಯಾಗಿರುವ ಮುನಿಯಪ್ಪ ಅವರಿಗೆ ಕಾಂಗ್ರೆಸ್ ವರಿಷ್ಠರು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮಾದಿಗ ಸಮಾಜದ ಮುಖಂಡ ರಾಮು ಕಣೇಕಲ್ ಅವರು ಒತ್ತಾಯಿಸಿದ್ದಾರೆ.

ವರದಿ :ವೆಂಕಟಪ್ಪ ಕೆ ಸುಗ್ಗಾಲ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ