Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾರಾಯಣ ಮರಕುಂದ ಅವರ ನಿವೃತ್ತ ಜೀವನ ಸುಖಕರವಾಗಿರಲಿ

Advertisement
ಚಿಟಗುಪ್ಪ : ಶಿಕ್ಷಣ ಕ್ಷೇತ್ರ ಅತ್ಯಂತ ಗೌರವ ವಾದಂತಹ ಕ್ಷೇತ್ರವಾಗಿದೆ.ಇದರಲ್ಲಿ ನಡೆದಷ್ಟು ದಾರಿ ಇದೆ, ಮತ್ತು ಪಡೆದಷ್ಟು ಭಾಗ್ಯವಿದೆ ಎಂದು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ರಾಜಪ್ಪ ಜಮಾದಾರ ಹೇಳಿದರು.

ಚಿಟಗುಪ್ಪಾ ತಾಲ್ಲೂಕಿನ ಶಾಮತಾಬಾದ ಗ್ರಾಮದಲ್ಲಿ ಶನಿವಾರ ಹಳೆ ವಿದ್ಯಾರ್ಥಿಗಳ ಬಳಗ ಶಾಮತಾಬಾದ,ಎಸ್ಡಿಎಂಸಿ ಸಮಿತಿ ಶಾಮತಾಬಾದ ಹಾಗೂ ಶಾಲಾ ಸಿಬ್ಬಂದಿ ವರ್ಗ ಶಾಮತಾಬಾದ ವತಿಯಿಂದ ಹಮ್ಮಿಕೊಂಡಿದ್ದ ಶಿಕ್ಷಕ ನಾರಾಯಣ ಮರಕುಂದ ರವರ ನಿವೃತ್ತಿ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಾರಾಯಣ ಮರಕುಂದ ಅವರು ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಾಗಿ ಅದು ಶಾಮತಾಬಾದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವುದು ನಿಮ್ಮ ನಮ್ಮೆಲ್ಲರಿಗೆ ಹೆಮ್ಮೆಯ ವಿಷಯವಾಗಿದೆ.

ತಮ್ಮ ಸೇವಾ ಅವಧಿಯಲ್ಲಿ ಬಹಳಷ್ಟು ಜನ ಶಿಷ್ಯಂದಿರ ಮತ್ತು ಅಭಿಮಾನಿ ಬಳಗವನ್ನು ಹೊಂದಿರುವ ಇವರು ತಮ್ಮ ನಿವೃತ್ತಿ ಜೀವನದಲ್ಲಿ ಸಮಾಜದ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜದ ಮತ್ತು ಶೈಕ್ಷಣಿಕ ಬೆಳವಣಿಗೆಗಾಗಿ ಮಾರ್ಗದರ್ಶನ ನೀಡುವಂತಹ ಕೆಲಸ ಇವರಿಂದ ನಡೆಯಲಿ ಎಂದು ಹೇಳಿದರು.

ಬಳಿಕ ನಿವೃತ್ತ ಶಿಕ್ಷಕ ನಾರಾಯಣ ಮರಕುಂದ ಅವರನ್ನು ಶಾಮತಾಬಾದ ಗ್ರಾಮದ ಪ್ರಮುಖ ಬಿದಿಗಳಲ್ಲಿ ಭವ್ಯ ಮೆರವಣಿಗೆ ಮಾಡಿದರು.ಪ್ರಸ್ತಕ ಸಾಲಿನ ಶಾಲಾ ವಿದ್ಯಾರ್ಥಿಗಳು ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದರು.

ಈ ಸಂದರ್ಭದಲ್ಲಿ ಶಾಮತಬಾದ ಸರ್ಕಾರಿ ಪ್ರಾಥಮಿಕ ಶಾಲಾ ಸಿಬ್ಬಂದಿಗಳು,ಯುವಕರು,ಗ್ರಾಮಸ್ಥರು ಹಹಾಗೂ ವಿದ್ಯಾರ್ಥಿಗಳು ಇದ್ದರು.

ವರದಿ : ಸಜೀಶ ಲಂಬುನೋರ

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ