Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಲಿ: ವಾಲ್ಮೀಕಿ ಪೀಠದ ಸ್ವಾಮೀಜಿ

Advertisement

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದೆಡೆ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಬೆಂಬಲಿಗರು ಘೋಷಣೆ ಕೂಗುತ್ತಿದ್ದರೆ, ಮತ್ತೊಂದೆಡೆ ಪರಮೇಶ್ವರ್ ಮುಂದಿನ ಮುಖ್ಯಮಂತ್ರಿಯಾಗಲಿ ಎಂಬ ಘೋಷಣೆ ಆರಂಭವಾಗಿದೆ.


ಈ ನಡುವೆ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಲಿ ಎಂದು ಹಲವರು ಹೇಳಿಕೆ ನೀಡಲಾರಂಭಿಸಿದಾರೆ.

ವಾಲ್ಮೀಕಿ ಪೀಠದ ರಾಜನಹಳ್ಳಿ ಪ್ರಸನ್ನಾನಂದ ಸ್ವಾಮೀಜಿ, ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಲಿ ಎಂದಿದ್ದಾರೆ.

ಸಿದ್ದರಾಮಯ್ಯ ಮುಂದುವರೆದರೆ ವಾಲ್ಮೀಕಿ ಸಮಾಜದ ಶಾಸಕರ ವಿರೋಧವಿಲ್ಲ. ಹಿಂದುಳಿದ ವರ್ಗಗಳ ವಿರೋಧವೂ ಇಲ್ಲ ಅವೇ ಮುಂದುವರೆದರೆ ಒಳ್ಳೆಯದು ಎಂದಿದ್ದಾರೆ.

ಬೆಳಗಾವಿ ನಗರದಲ್ಲಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ಪ್ರತಿ ವರ್ಷದಂತೆ ವಾಲ್ಮೀಕಿ ಪೀಠದ ರಾಜನಹಳ್ಳಿ ಮಠದಿಂದ ವಾಲ್ಮೀಕಿ ಜಯಂತಿ‌ ಮಾಡುತ್ತೇವೆ.

ಹೀಗಾಗಿ ಸಚಿವ ಸತೀಶ ಜಾರಕಿಹೋಳಿ ಸಭೆಗೆ ಆಗಮಿಸಿದ್ದರು. ಅಧಿವೇಶನದಲ್ಲಿ ಬಹುತೇಕ ನಮ್ಮ ಎಲ್ಲ ಸಮೂದಾಯದ ನಾಯಕರು ಬಂದಿರುತ್ತಾರೆ.

ಹೀಗಾಗಿ ಜಾತ್ರೆಯ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು. ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಜಾತ್ರೆಗೆ ಆಹ್ವಾನಿಸುತ್ತೇವೆ. ಸಿಎಂ ಭೇಟಿ ವೇಳೆ ನಮ್ಮ ಸಮುದಾಯಕ್ಕೆ ಎರಡು ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡುತ್ತೇವೆ ಎಂದರು.

ಸಿಎಂ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ವಾಲ್ಮೀಕಿ‌ ಸಮಾಜದ ಶಾಸಕರು ಹಾಗೂ ಸಮಾಜದಿಂದ ಬೆಂಬಲವಿದೆ.‌

ಒಂದು ವೇಳೆ ಬದಲಾಗುತ್ತಾರೆ ಎನ್ನುವುದಾದರೆ ದಲಿತರು ಸಿಎಂ ಆಗಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ