Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯಕ್ಕಾಗಿ ಪಾದಯಾತ್ರೆ ಮಾಡಲಿ : ಬಿಜೆಪಿ ವಿರುದ್ಧ ಸವದಿ ಎಂದು ಲೇವಡಿ

Advertisement
ಬೆಂಗಳೂರು: ಮುಡಾ ಹಗರಣದ ಕುರಿತಂತೆ ತನಿಖೆಗೆ ಆಗ್ರಹಿಸಿ ಪ್ರತಿಪಕ್ಷಗಳ ನಾಯಕರು ವಿಧಾನಸೌಧದಲ್ಲಿ ಆಹೋರಾತ್ರಿ ಧರಣಿ ಮುಂದುವರಿಸಲು ಪಟ್ಟು ಹಿಡಿದಿವೆ. ವಿಪಕ್ಷಗಳ ಈ ನಡೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ,ಸಾಕಷ್ಟು ಜನರಿಗೆ ಬಿಪಿ, ಶುಗರ್ ಇದೆ.ಆರೋಗ್ಯಕ್ಕಾಗಿ ಪಾದಯಾತ್ರೆ ಮಾಡಬಹುದು ಎಂದು ಲೇವಡಿ ಮಾಡಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ನಡೆದಿದ್ದರೆ ಯಾರ ಅವಧಿಯಲ್ಲಿ ನಡೆದಿದೆ, ಆಗ ಯಾರು ಮುಖ್ಯಮಂತ್ರಿ, ಕಂದಾಯ ಮಂತ್ರಿ ಆಗಿದ್ದರು, ಈ ನಾಯಕರೆಲ್ಲ ಆಗ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.

ನಿಜವಾಗಿಯೂ ಹೋರಾಟಮಾಡಬೇಕಿದ್ದರೆ ಮೊದಲಿನಿಂದ ಮಾಡುತ್ತಿದ್ದರು. ಈಗ ಊಟ, ಹಾಸಿಗೆ ಕೊಡ್ತಾರೆ ಮಲಗಿ ಹೋಗೋಣ ಅಂತ ಪ್ರತಿಭಟನೆ ಮಾಡ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ವಿರೋಧ ಪಕ್ಷ ನಾಯಕರಿಲ್ಲದೆ ನಿಷ್ಕ್ರಿಯ ಆಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಡ್ರಾಮಾ ಮಾಡ್ತಿದ್ದಾರೆ. ಇದು ಅಹೋರಾತ್ರಿ ಧರಣಿ ಅಲ್ಲ ನಾಟಕ ಅಷ್ಟೇ. ವಿಪಕ್ಷದವರು ನಾವು ಜೀವಂತವಾಗಿ ಇದ್ದೇವೆ ಎಂದು ತೋರಿಸಿಕೊಳ್ಳಲು ಈ ಧರಣಿ. ಸಾಕಷ್ಟು ಜನರಿಗೆ ಬಿಪಿ, ಶುಗರ್ ಇದೆ. ಆರೋಗ್ಯಕ್ಕಾಗಿ ಪಾದಯಾತ್ರೆ ಮಾಡಬಹುದು. ಇನ್ನೂ 20 ವರ್ಷ ರಾಜಕಾರಣ ಮಾಡಲು ಆರೋಗ್ಯ ಚೆನ್ನಾಗಿ ಇರಬೇಕು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಯ ಪತ್ನಿಗೆ ಅವರ ಕುಟುಂಬದಿಂದ ಆಸ್ತಿ ಬಂದಿದೆ. ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ. ಕೇಂದ್ರ ಬಜೆಟ್ ವೈಫಲ್ಯ ಮುಚ್ಚಿಕೊಳ್ಳಲು ಸೂಚನೆ ಬಂದಿದೆ. ಅದಕ್ಕೆ ಇಲ್ಲಿ ಧರಣಿ ನಡೆಯುತ್ತಿದೆ. ಈ ನಾಟಕದ ಹಿಂದಿರುವವರು ಯಾರು ಎಂಬುದನ್ನು ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸುತ್ತೇನೆ ಎಂದಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ