Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತ ಅಧಿಕಾರಿಗಳಿಂದ ಮಹಾನಗರ ಪಾಲಿಕೆ ಕಚೇರಿಗೆ ಮಿಂಚಿನ ಭೇಟಿ

Advertisement
ಕಾರ್ಯಚಟುವಟಿಕೆಗಳ ಪರಿಶೀಲನೆ-ತೀವ್ರ ಅಸಮಧಾನ

ರಾಯಚೂರು : ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತರ ತಂಡ ಮಿಂಚಿನ ಬೇಟಿ ನೀಡಿ ಕಚೇರಿ ಕಾರ್ಯಚಟುವಟಿಕೆಗಳನ್ನು ಖುದ್ದಾಗಿ ಪರಿಶೀಲಿಸಿ ಅವ್ಯವಸ್ಥೆಯಕುರಿತು ತೀವ್ರ ಅಸಮಧಾನ ವ್ಯಕ್ತಪಡಿಸಿದ ಘಟನೆ ಸೋಮವಾರಜರುಗಿದೆ.

ಕಚೇರಿ ಪ್ರಾರಂಭವಾಗುತ್ತಿದ್ದಂತೆ ಲೋಕಾಯುಕ್ತ ನಿಬಂಧಕ ಎ.ವಿ.ಪಾಟೀಲ್ ನೇತೃತ್ವದ ತಂಡ ಪಾಲಿಕೆ ಹಳೆ ಕಚೇರಿಗೆ ಭೇಟಿ ನೀಡಿ ವಿಭಾಗವಾರು ಪರಿಶೀಲನೆ ನಡೆಸಿದರು. ಆಸ್ತಿ ನೊಂದಣಿ, ಕರ ಸಂಗ್ರಹ ವಿಭಾಗ, ತಾಂತ್ರಿಕ ವಿಭಾಗ ಸೇರಿದಂತೆ ಪ್ರತಿ ಸಿಬ್ಬಂದಿ ಬಳಿಯೇ ತೆರಳಿ ಲೋಕಾಯುಕ್ತರು ನಿತ್ಯ ಕಾರ್ಯಚಟುವಟಿಕೆ,

ಬಾಕಿಯಿರುವ ಕಡತಗಳ ಮಾಹಿತಿ ಪಡೆದರು. ಇ-ಖಾತಾ, ಮುಟೇಷನ್, ಕುಡಿಯುವನೀರಿನ ಸಂಪರ್ಕ ಸೇರಿದಂತೆ ಸಾರ್ವಜನಿಕರ ಸಲ್ಲಿಸಿರುವ ಅರ್ಜಿಗಳ ವಿಲೇವಾರಿ ಮಾಹಿತಿ ಪಡೆದರು. ಪಾಲಿಕೆ ಕಚೇರಿಯಲ್ಲಿ ಜನರು ನೀಡುವ ದೂರುಗಳು, ಅರ್ಜಿಗಳಿಗೆ ದೂರಿನ ಸಂಖ್ಯೆ ನೀಡದೇ ಇರುವದಕ್ಕೆ ಬೇಸರ ವ್ಯಕ್ತಪಡಿಸಿದ ಲೋಕಾಯುಕ್ತರು ಹೇಗೆ ಕಾರ್ಯನಿರ್ವಹಿಸುತ್ತೀರಿ ಎಂದು ಪ್ರಶ್ನಿಸಿದರು. ಜನರು ನೀಡುವ ಅರ್ಜಿಗಳಿಗೆ ಸಂಖ್ಯೆ ನೀಡದೇ ಹೋದರೆ ಎಷ್ಟು ದೂರಗಳನ್ನು ಇತ್ಯರ್ಥಪಡಿಸಿರುವ ಮಾಹಿತಿ ಸಂಗ್ರಹಿಸುವದಾಗಿ ಪ್ರಶ್ನಿಸಿದರು.

ಕುಡಿಯುವ ನೀರು ಹಾಗೂ ಬೀದಿ ದೀಪಗಳ ನಿರ್ವಹಣೆ ಹಾಗೂ ಕಂದಾಯ ಸಂಗ್ರಹದ ಕುರಿತಾಗಿ ಇಲಾಖೆ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಅನೇಕ ಸಿಬ್ಬಂದಿಗಳು ಅಸಮರ್ಪಕ ಮಾಹಿತಿ ನೀಡಿದ್ದರಿಂದ ಬೇಸರ ವ್ಯಕ್ತಪಡಿಸಿದರು. ಸಾರ್ವಜನಿಕರು ನಿತ್ಯದ ಕೆಲಸಗಳಿಗೆ ಕಚೇರಿಗೆ ಅಲೆಯುತ್ತಿದ್ದರೂ ಸಕಾಲದಲ್ಲಿ ವಿಲೇವಾರಿ ಏಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ ಅವರು ಲೋಪ ಕಂಡು ಬಂದರೆ ಕ್ರಮಕ್ಕೆ ಶಿಫಾರಸ್ಸು ಮಾಡುವದಾಗಿಯೂ ಎಚ್ಚರಿಸಿದರು. ಪಾಲಿಕೆಯ ವಿವಿಧ ವಿಭಾಗಗಳಲ್ಲಿ ಬಾಕಿಯಿರು ಕಡತಗಳ ಮಾಹಿತಿ ನೀಡುವಂತೆ ಸೂಚಿಸಿದರು. ಕಕ್ಕಾಬಿಕ್ಕಿಯಾದ ಸಿಬ್ಬಂದಿಗಳು ಮಾಹಿತಿ ನೀಡಲು ತಡವರಿಸಿದರು. ಅನಗತ್ಯ ಜನರು ಕಚೇರಿಯಲ್ಲಿ ಉಳಿಯಲು ಸಿಬ್ಬಂದಿಗಳೇಕೆ ಸಹಕರಿಸುತ್ತಿರಿ ಎಂದು ಪ್ರಶ್ನಿಸಿದರು. ಈ ಸಂದರ್ಬದಲ್ಲಿ ಲೋಕಾಯುಕ್ತ ಡಿವೈಎಸ್ಪಿಭರತರೆಡ್ಡಿ, ಇನ್‌ಸ್ಪೆಕ್ಟ‌ರ್ ರಾಜಶೇಖರಯ್ಯ ಸೇರಿ ಸಿಬ್ಬಂದಿಗಳಿದ್ದರು.

ವರದಿ : ಗಾರಲದಿನ್ನಿ ವೀರನಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ