Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ : ಐವರು ಶಂಕಿತ ಉಗ್ರರು ಅರೆಸ್ಟ್

Advertisement

ಗಾಂಧಿನಗರ: ನಿಷೇಧಿತ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಐವರು ಶಂಕಿತ ಉಗ್ರರನ್ನು ಗುಜರಾತ್ ಉಗ್ರನಿಗ್ರಹ ದಳ (ATS) ಬಂಧಿಸಿದೆ.

ಬಂಧಿತರನ್ನು ಬಿಲಾಲ್ ಅಬಿದ್ ಶೇರಾ, ಮೊಹಮ್ಮದ್ ಆಯೂಬ್ ಖಾಡಿವಾಲ್, ಮೊಹಮ್ಮದ್ ಶಾಪಿ ಮುಖಿ, ಮೊಹಮ್ಮದ್ ಹಸನ್ ಕರಾಡಿಯಾ ಮತ್ತು ಮೊಹಮ್ಮದ್ ಆಯೂಬ್ ಸುನಾಸರಾ ಎಂದು ಗುರುತಿಸಲಾಗಿದೆ.

ಬಂಧಿತರಲ್ಲಿ ಒಬ್ಬ ಟೈಮ್ ಬಾಂಬ್ ತಯಾರಿಸುವ ಸಿದ್ಧತೆ ನಡೆಸಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಬಂಧಿತರೆಲ್ಲರೂ ಪಾಕ್ ಮೂಲದ ಜೈಶ್ ಸಂಘಟನೆಯ ಸದಸ್ಯರಾಗಿದ್ದು, ಸ್ಫೋಟಕ ಸಾಧನಗಳನ್ನು ಪರೀಕ್ಷಿಸುವ ಕೃತ್ಯದಲ್ಲಿ ತೊಡಗಿದ್ದರು ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ತಿಂಗಳ ಆರಂಭದಲ್ಲಿ ಎಟಿಎಸ್ ಈ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಿತ್ತು.

ಆರೋಪಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ಸಂಪರ್ಕಿಸಿ ದೇಶವಿರೋಧಿ ಕೃತ್ಯಗಳಲ್ಲಿ ಭಾಗಿಯಾಗುವಂತೆ ಪ್ರೇರೇಪಿಸುತ್ತಿದ್ದರು.

ಈ ಐವರು ಶಂಕಿತರನ್ನು ಈ ಹಿಂದೆ ಬಂಧಿಸಲಾಗಿದ್ದ ಉಗ್ರ ಘಟಕದ ಸದಸ್ಯರ ವಿಚಾರಣೆ ವೇಳೆ ದೊರೆತ ಮಾಹಿತಿಯ ಆಧಾರದ ಮೇಲೆ ಪತ್ತೆಹಚ್ಚಿ ಬಂಧಿಸಲಾಗಿದೆ. ಹೆಚ್ಚಿನ ತನಿಖೆಗಾಗಿ ನ್ಯಾಯಾಲಯ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಈ ಪ್ರಕರಣದಲ್ಲಿ ಈ ಹಿಂದೆ ನಡೆದ ತನಿಖೆಯಲ್ಲಿ ಬಂಧಿತರಿಗೆ ಪಾಕಿಸ್ತಾನದಲ್ಲಿರುವ ಹ್ಯಾಂಡ್ಲರ್‌ಗಳಿಂದ ಹಣಕಾಸಿನ ನೆರವು ದೊರೆಯುತ್ತಿತ್ತು ಎಂಬುದು ಬಹಿರಂಗವಾಗಿತ್ತು. ಅಲ್ಲದೆ, ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವಂತೆ ಹ್ಯಾಂಡ್ಲರ್‌ಗಳು ಸೂಚನೆ ನೀಡಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿತ್ತು. ಎಟಿಎಸ್ ಅಧಿಕಾರಿಗಳ ಪ್ರಕಾರ, ಬಂಧಿತರಲ್ಲಿ ಒಬ್ಬನಿಗೆ ಸ್ಫೋಟಕಗಳ ಕುರಿತು ಉತ್ತಮ ಜ್ಞಾನವಿದ್ದು, ಆತ ಕಾರ್ಯನಿರ್ವಹಿಸುವ ಟೈಮ್ ಬಾಂಬ್ ನಿರ್ಮಿಸುವ ಅಂತಿಮ ಹಂತದಲ್ಲಿದ್ದ. ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಎಟಿಎಸ್ ತಂಡ, ಬಾಂಬ್ ತಯಾರಿ ಸಿದ್ಧತೆ ವಿಫಲಗೊಳಿಸಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುರುಮಠಕಲ್‌ನಲ್ಲಿ ಕುರಿ ಸಂತೆ ಆರಂಭಿಸಿ; ರಸ್ತೆ ಬದಿಯ ಅಕ್ರಮ ವ್ಯಾಪಾರಕ್ಕೆ ಕಡಿವಾಣ ಹಾಕಿಸ್ಯಾಂಡಲ್‌ವುಡ್‌ನ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಇನ್ನಿಲ್ಲ ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ : ಐವರು ಶಂಕಿತ ಉಗ್ರರು ಅರೆಸ್ಟ್19ಕ್ಕೆ 'ಅಯೋಗ್ಯ -2 ಚಿತ್ರದ ಧ್ವನಿಸುರಳಿ ಬಿಡುಗಡೆ ಪುಣೆ ಮಾದರಿಯಲ್ಲಿಯೇ ಮತ್ತೊಂದು ಹತ್ಯೆ : ಮಗುವಿನ ಎದುರೇ ಗಂಡನ ಬರ್ಬರ ಹತ್ಯೆಗೈದ ಹೆಂಡತಿ, ಪ್ರಿಯಕರ ಚಾಮುಂಡಿ ದೇವಿಗೆ ಹರಕೆ ಸೀರೆ ತೀರಿಸಿದ್ದ ಡಿ.ಕೆ.ಶಿವಕುಮಾರ್ ಪತ್ನಿ ವಿದ್ಯುತ್,ಡಿಸೇಲ್ ಇಲ್ಲದ ದೇಶದ ಹೈಡ್ರೋಜನ್ ರೈಲಿಗೆ ಮೋದಿ ಚಾಲನೆ ಕಟ್ಟ ಕಡೆಯ ಮಗುವಿಗೂ ಶಿಕ್ಷಣ ಸಿಗುವಂತಾಗಬೇಕು :ಅಶೋಕ  ಮಲಬನ್ನವರ15 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ : ಎರಡನೇ ಬಾರಿಗೆ ಗರ್ಭಿಣಿಯಾದ ಬಾಲಕಿಪ್ರೀತಿಸಿ ಮದುವೆಯಾಗಿದ್ದ ಕೆಲವೇ ಕ್ಷಣಗಳಲ್ಲಿ ನವವಿವಾಹಿತನ್ನ ಬರ್ಬರ ಹತ್ಯೆ