Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆಯಿಂದ 250 ಅಂಗನವಾಡಿ ಕೇಂದ್ರಗಳಲ್ಲೂ ಎಲ್ ಕೆಜಿ, ಯುಕೆಜಿ ಆರಂಭ

Advertisement
ಬೆಂಗಳೂರು : ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು ಮೊದಲ ಹಂತದಲ್ಲಿ ಬೆಂಗಳೂರಿನ 250 ಅಂಗನವಾಡಿಗಳನ್ನು ಗುರುತಿಸಿದ್ದು, ಹಂತಹಂತವಾಗಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲೂ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಶನಿವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದೊರೆತ ತಾತ್ವಿಕ ಒಪ್ಪಿಗೆ ಮೇರೆಗೆ ಹಂತ-ಹಂತವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿಯೂ ಪೂರ್ವ ಪ್ರಾಥಮಿಕ (LKG & UNG) ಗಳನ್ನು ಪ್ರಾರಂಭಿಸಲು ಆದೇಶಿಸಲಾಗಿದೆ.

ಅದರಂತೆ, ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (LKG & UKG) ಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಬೆಂಗಳೂರು ಉತ್ತರ ಜಿಲ್ಲೆಯ 62, ಪೂರ್ವ ಜಿಲ್ಲೆಯ 20, ಕೇಂದ್ರ ಜಿಲ್ಲೆಯ 50, ಬೆಂಗಳೂರು ರಾಜ್ಯ (ಪ್ರೊಜೆಕ್ಟ್) 50, ಬೆಂಗಳೂರು ದಕ್ಷಿಣ 48, ಆನೆಕಲ್ 20 ಕೇಂದ್ರಗಳನ್ನು ಆಯ್ಕೆ ಮಾಡಲಾಗಿದ್ದು, 1,238 ಗಂಡು ಹಾಗೂ 1,203 ಹೆಣ್ಣು ಮಕ್ಕಳು ಸೇರಿ ಒಟ್ಟೂ 2,441 ಮಕ್ಕಳು ಇದರಲ್ಲಿ ಒಳಗೊಳ್ಳಲಿದ್ದಾರೆ.

04 ರಿಂದ 06 ವರ್ಷದ ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ಪಠ್ಯ, ಪುಸ್ತಕ (ಆಂಗ್ಲ ಹಾಗೂ ಕನ್ನಡ ಮಾಧ್ಯಮ) ನೀಡಲು, 1 ಜೊತೆ ಸಮವಸ್ತ್ರ ನೀಡಲು, 1 ಬ್ಯಾಗ್ ಮತ್ತು ಪೆನ್ಸಿಲ್ ಬಾಕ್ಸ್ ನೀಡಲು ನಿರ್ಧರಿಸಲಾಗಿದೆ. ಇದಕ್ಕೆ ಸಿಎಸ್‌ಆರ್ ಫಂಡ್ ಪಡೆಯಲು ಉದ್ದೇಶಿಸಲಾಗಿದೆ.

LKG & UKG -ಪೂರ್ವ ಪ್ರಾಥಮಿಕ ಕೇಂದ್ರಗಳನ್ನು ಪ್ರತಿ ದಿನ ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನಡೆಸಲು ಉದ್ದೇಶಿಸಲಾಗಿದೆ. ಪೂರ್ವ ಪ್ರಾಥಮಿಕ ಕೇಂದ್ರಗಳಲ್ಲಿ ಹಾಲಿ PUC ಮತ್ತು ಪದವಿ / ಸ್ನಾತಕೋತ್ರದ ಪದವಿ ವಿದ್ಯಾರ್ಹತೆ ಹೊಂದಿರುವ ಹಾಗೂ ಈಗಾಗಲೇ ಅಗತ್ಯ ತರಬೇತಿ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಮಾತ್ರ ಬೋಧನೆ ಮಾಡಲು ಗುರುತಿಸಲಾಗಿದೆ. ಆಂಗ್ಲ ಹಾಗೂ ಕನ್ನಡ ಮಾಧ್ಯಮಗಳಲ್ಲಿ ಬೋಧನೆ ಮಾಡಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದೇ ಸೋಮವಾರ, ಜುಲೈ 22ರಿಂದ 250 ಅಂಗನವಾಡಿ ಕೇಂದ್ರಗಳಲ್ಲಿ LKG & UKG ಪೂರ್ವ ಪ್ರಾಥಮಿಕ ಕೇಂದ್ರಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ