Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ 

Advertisement
ಬಾಗಲಕೋಟೆ : ರಾಜ್ಯದಲ್ಲಿ 2 A ಮೀಸಲಾತಿಗೆ ಜಯಮೃತ್ಯುಂಜಯ ಶ್ರೀಗಳು ಪಣ ತೊಟ್ಟಿದ್ದರೆ, ಅತ್ತ ಬಾಗಲಕೋಟೆಯ ಹುನಗುಂದ ತಾಲೂಕಿನಲ್ಲಿರುವ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಬಿದ್ದಿದೆ.

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಹೋರಾಟಕ್ಕೆ ಮುಂಚೂಣಿಯಲ್ಲಿದ್ದ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟವನ್ನು ಮುಂದುವರಿಸುತ್ತಿದ್ದರೇ, ಅಂತಹ ಸಮಯದಲ್ಲಿ ಅವರ ಆಧ್ಯಾತ್ಮಿಕ ಪೀಠವಿರುವ ಕೂಡಲಸಂಗಮದಲ್ಲಿಯೇ ಪೀಠಕ್ಕೆ ಬೀಗ ಹಾಕಲಾಗಿದೆ.

ಕಳೆದ ಕೆಲವು ದಿನಗಳಿಂದ ಪೀಠಾಧ್ಯಕ್ಷರ ಬದಲಾವಣೆ ಕೂಗು ಜೋರಾಗಿ ಕೇಳಿ ಬರುತ್ತಿತ್ತು. ಅಷ್ಟೇ ಅಲ್ಲದೆ ಪ್ರಸಂಗ ಬಂದರೆ ಪೀಠಾಧ್ಯಕ್ಷರನ್ನು ಬದಲಾವಣೆ ಮಾಡ್ತೀವಿ ಅಂತ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದರು. ಆದರೆ ಇದೀಗ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಪೀಠಕ್ಕೆ ಬೀಗ ಬಿದ್ದಿದೆ.

ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಕಾಂಗ್ರೆಸ್ ನ ಪಂಚಮಸಾಲಿ ನಾಯಕರು ಹೋರಾಟಗಾರರಾದ ವಿಜಯಾನಂದ ಕಾಶಪ್ಪನರ್‌, ಹೆಬ್ಬಾಳ್ಕರ್‌, ಹಾಗೂ ಬಿಜೆಪಿ ನಾಯಕರಾದ ಯತ್ನಾಳ್‌ ಮುಂಚೂಣಿ ಹೋರಾಟ ನಡೆಸಿದ್ದರು.

ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಕೈ ನಾಯಕರು ಮಧ್ಯದಲ್ಲೇ ಎಸ್ಕೇಪ್ ಆಗಿದ್ದರು. ಈ ವೇಳೆ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಯತ್ನಾಳ್ ಇಬ್ಬರೇ 2A ಮೀಸಲಾತಿಗೆ ಹೋರಾಟ ನಡೆಸಿದ್ದರು. ಇದೇ ಇಬ್ಬರ ನಡುವೆ ಬಿರುಕು ಮೂಡಲು ಕಾರಣವಾಗಿತ್ತು.

ಈ ಬೆಳವಣಿಗೆಯ ಬಳಿಕ ವಿಜಯಾನಂದ ಕಾಶಪ್ಪನರ್‌ ಹಾಗೂ ಶ್ರೀಗಳ ನಡುವೆ ಮಾತಿನ ಸಮರ ಉಂಟಾಗಿತ್ತು. ಈ ವೇಳೆ ಕಾಶಪ್ಪನವರ್‌, ಅನಿವಾರ್ಯ ಬಂದರೆ ಪೀಠದಿಂದಲೇ ಅವರನ್ನು ಇಳಿಸುತ್ತೇವೆ ಎಂದಿದ್ದರು. ಈ ಮಾತಿನ ನಡುವೆ ಕೂಡಲ ಸಂಗಮದ ಪೀಠಕ್ಕೆ ಬೀಗ ಬಿದ್ದಿದೆ.

ಸದ್ಯ ಈ ಕ್ರಮವು ಪೀಠದ ಟ್ರಸ್ಟ್ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕರಾದ ವಿಜಯಾನಂದ ಕಾಶಪ್ಪನವರ ಸೂಚನೆಯ ಮೇರೆಗೆ ನಡೆದಿದೆ ಎನ್ನಲಾಗಿದ್ದು, ಈ ಕುರಿತಾಗಿ ಹುನಗುಂದ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಅಷ್ಟೇ ಅಲ್ಲದೆ ಪೀಠದ ಬೀಗ ಮುರಿದ ಆರೋಪದ ಮೇಲೆ ಸ್ವಾಮೀಜಿಯ ಬೆಂಬಲಿಗರ ಐವರ ಮೇಲೆ ಎಫ್‌ಐಆರ್ ದಾ ಖಲಾಗಿದೆ.ಕಳೆದ ಕೆಲವು ದಿನಗಳಿಂದ ಪೀಠಾಧ್ಯಕ್ಷರ ಬದಲಾವಣೆ ಕೂಗು ಜೋರಾಗಿ ಕೇಳಿ ಬರುತ್ತಿತ್ತು. ಅಷ್ಟೇ ಅಲ್ಲದೆ ಪ್ರಸಂಗ ಬಂದರೆ ಪೀಠಾಧ್ಯಕ್ಷರನ್ನು ಬದಲಾವಣೆ ಮಾಡ್ತೀವಿ ಅಂತ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದರು. ಆದರೆ ಇದೀಗ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಪೀಠಕ್ಕೆ ಬೀಗ ಬಿದ್ದಿದೆ.

ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಕಾಂಗ್ರೆಸ್ ನ ಪಂಚಮಸಾಲಿ ನಾಯಕರು ಹೋರಾಟಗಾರರಾದ ವಿಜಯಾನಂದ ಕಾಶಪ್ಪನರ್‌, ಹೆಬ್ಬಾಳ್ಕರ್‌, ಹಾಗೂ ಬಿಜೆಪಿ ನಾಯಕರಾದ ಯತ್ನಾಳ್‌ ಮುಂಚೂಣಿ ಹೋರಾಟ ನಡೆಸಿದ್ದರು.

ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಕೈ ನಾಯಕರು ಮಧ್ಯದಲ್ಲೇ ಎಸ್ಕೇಪ್ ಆಗಿದ್ದರು. ಈ ವೇಳೆ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಯತ್ನಾಳ್ ಇಬ್ಬರೇ 2A ಮೀಸಲಾತಿಗೆ ಹೋರಾಟ ನಡೆಸಿದ್ದರು. ಇದೇ ಇಬ್ಬರ ನಡುವೆ ಬಿರುಕು ಮೂಡಲು ಕಾರಣವಾಗಿತ್ತು.

ಈ ಬೆಳವಣಿಗೆಯ ಬಳಿಕ ವಿಜಯಾನಂದ ಕಾಶಪ್ಪನರ್‌ ಹಾಗೂ ಶ್ರೀಗಳ ನಡುವೆ ಮಾತಿನ ಸಮರ ಉಂಟಾಗಿತ್ತು. ಈ ವೇಳೆ ಕಾಶಪ್ಪನವರ್‌, ಅನಿವಾರ್ಯ ಬಂದರೆ ಪೀಠದಿಂದಲೇ ಅವರನ್ನು ಇಳಿಸುತ್ತೇವೆ ಎಂದಿದ್ದರು. ಈ ಮಾತಿನ ನಡುವೆ ಕೂಡಲ ಸಂಗಮದ ಪೀಠಕ್ಕೆ ಬೀಗ ಬಿದ್ದಿದೆ.

ಸದ್ಯ ಈ ಕ್ರಮವು ಪೀಠದ ಟ್ರಸ್ಟ್ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕರಾದ ವಿಜಯಾನಂದ ಕಾಶಪ್ಪನವರ ಸೂಚನೆಯ ಮೇರೆಗೆ ನಡೆದಿದೆ ಎನ್ನಲಾಗಿದ್ದು, ಈ ಕುರಿತಾಗಿ ಹುನಗುಂದ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಅಷ್ಟೇ ಅಲ್ಲದೆ ಪೀಠದ ಬೀಗ ಮುರಿದ ಆರೋಪದ ಮೇಲೆ ಸ್ವಾಮೀಜಿಯ ಬೆಂಬಲಿಗರ ಐವರ ಮೇಲೆ ಎಫ್‌ಐಆರ್ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್