Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿವೃತ್ತ ಇಂಜಿನಿಯರ್ ಮನೆ  ಮೇಲೆ ಲೋಕಾಯುಕ್ತ ದಾಳಿ : 1000 ರೂ. ಮುಖಬೆಲೆಯ 9 ಲಕ್ಷ ರೂ. ಪತ್ತೆ

Advertisement

ಕಲಬುರಗಿ: ಲೋಕಾಯುಕ್ತ ದಾಳಿಗೆ ಒಳಗಾದ ನಿವೃತ್ತ ಇಂಜಿನಿಯರ್ ಮಾಣಿಕ್ ಕನಕಟ್ಟಿ ಅವರ ಬ್ಯಾಂಕ್ ಲಾಕರ್ ನಲ್ಲಿ 2016ರಲ್ಲಿ ಅಮಾನ್ಯೀಕರಣಗೊಂಡ 1000 ರೂ. ಮುಖಬೆಲೆಯ 9 ಲಕ್ಷ ರೂ. ಬಂಡಲ್ ಗಳು ಪತ್ತೆಯಾಗಿವೆ.

ಕಲಬುರಗಿಯ ಸಂಗಮೇಶ್ವರ ಬಡಾವಣೆಯ ಎಸ್.ಬಿ.ಐ. ಶಾಖೆಯ ಲಾಕರ್ ನಲ್ಲಿ ಈ ನೋಟುಗಳ ಬಂಡಲ್ ಹಾಗೂ 20 ತೊಲ ಚಿನ್ನಾಭರಣ ಪತ್ತೆಯಾಗಿದೆ.

10 ವರ್ಷದ ಹಿಂದೆ ಅಮಾನ್ಯೀಕರಣಗೊಂಡ ನೋಟುಗಳು ಇಷ್ಟು ದಿನ ಇಟ್ಟಿದ್ದು ಏಕೆ ಎನ್ನುವುದು ಅಚ್ಚರಿ ಮೂಡಿಸಿದೆ.

ಲೋಕಾಯುಕ್ತ ದಾಳಿಯ ವೇಳೆ ನಿವೃತ್ತ ಅಧಿಕಾರಿಯ ಬ್ಯಾಂಕ್ ಲಾಕರ್ ನಲ್ಲಿ ಹಳೆಯ ನೋಟುಗಳು ಚಿನ್ನಾಭರಣ ಪತ್ತೆಯಾಗಿದೆ. ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಲಬುರಗಿ ವೃತ್ತದ ನಿವೃತ್ತ ಅಧೀಕ್ಷಕ ಅಭಿಯಂತರ ಮಾಣಿಕ್ ಕನಕಟ್ಟಿ ಅವರ ಮನೆಯ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.

ಬುಧವಾರ ಕಲಬುರಗಿಯ ಸಂಗಮೇಶ್ವರ ಕಾಲೋನಿಯ ಎಸ್‌.ಬಿ.ಐ. ಬ್ಯಾಂಕ್ ನಲ್ಲಿರುವ ಅವರ ಲಾಕರ್ ಪರಿಶೀಲಿಸಿದಾಗ 1000 ರೂ. ಮುಖಬೆಲೆಯ 9 ಲಕ್ಷ ರೂ. ಹಳೆಯ ನೋಟುಗಳು, ಉಂಗುರ ಸೇರಿದಂತೆ 20 ತೊಲ ಚಿನ್ನಾಭರಣ ಪತ್ತೆಯಾಗಿದೆ.

ಕಲಬುರಗಿಯ ಗೋದುತಾಯಿ ನಗರದ ಎರಡು ಮನೆಗಳು, ಬೀದರ್ ಜಿಲ್ಲೆಯ ಹಳ್ಳಿಖೇಡಾ ಬಿ ಗ್ರಾಮದ ಮನೆ, ತೋಟಗಳು, ಹುಮ್ನಾಬಾದ್ ನಲ್ಲಿರುವ ಎರಡು ಕಾಂಪ್ಲೆಕ್ಸ್ ಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲಿಸಿದ್ದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST