Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆಯಿಂದ ಬೆಳೆ ಹಾನಿ: ಪರಿಹಾರಕ್ಕೆ ಮಹಾಂತೇಶ ಸಾಹುಕಾರ ಒತ್ತಾಯ

Advertisement
ಸೇಡಂ: ತಾಲೂಕಿನಲ್ಲಿ ಸತತವಾಗಿ ಸರಿಯುತ್ತಿರುವ ಮಳೆಯಿಂದ ಅಪಾರ ಬೆಳೆ ಹಾನಿಯಾಗಿದ್ದು, ಕಳೆದ ನಾಲ್ಕು ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಬೆಳೆದ ಹೆಸರು, ಹತ್ತಿ, ತೊಗರಿ, ಇನ್ನಿತರೆ ಬೆಳೆಗಳು ನೀರಿನಲ್ಲಿ ನಿಂತಿವೆ. ಸಾಲ-ಸೂಲ ಮಾಡಿ ಸಾವಿರ ರೂಪಾಯಿಗಳು ಖರ್ಚು ಮಾಡಿ ಬೆಳೆದ ರೈತರಿಗೆ ಮಳೆಯಿಂದ ಹೊಲಗಳಲ್ಲಿ ನೀರು ನಿಂತು ಬೆಳೆದ ಬೆಳೆ ಕೊಳೆತು ಹೋಗುವ ಸ್ಥಿತಿಯಲ್ಲಿದೆ ಅಕಾಲಿಕ ಮಳೆಯೊಂದಿಗೆ ಪರಿಣಾಮ ಹಲವು ಕಡೆಗಳಲ್ಲಿ ಭತ್ತದ ಬೆಳೆ ನೆಲಕ್ಕುರಳಿದೆ.ಕೋಯ್ಲಿಗೆ ಬಂದ ಬೆಳೆ ಮಣ್ಣು ಪಾಲಾಗಿದೆ.ಹೀಗಾಗಿ ರೈತರ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.



ಈ ವರ್ಷ ರೈತರಿಗೆ ರಸಗೊಬ್ಬರ ಸಿಗದೆ ಪರದಾಡುವ ಪರಿಸ್ಥಿತಿಯಲ್ಲಿ ಇದ್ದರೂ ಕೂಡಾ ರೈತರು ಕೃಷಿಯನ್ನು ಬಿಡದೇ ಅತಿಹೆಚ್ಚು ಬಿತ್ತನೆ ಮಾಡಿ ಬೆಳೆದಿದ್ದರು. ಆದ ಕಾರಣ ಸರಕಾರ ಎಚ್ಚೆತ್ತುಕೊಂಡು ಕಂದಾಯ ಹಾಗೂ ಕೃಷಿ ಇಲಾಖೆಗಳ ಜಂಟಿ ಸಮಿಕ್ಷೆಯನ್ನು ಕೈಗೊಂಡು ನೊಂದ ರೈತರಿಗೆ ತ್ವರಿತವಾಗಿ ಪ್ರತಿ ಎಕರೆಗೆ 10000 ಸಾವಿರ ರೂಪಾಯಿಗಳಂತೆ ಪರಿಹಾರ ವಿತರಿಸಲು ಮುಂದಾಗಬೇಕು, ಸಂಕಷ್ಟಕ್ಕೆ ಸಿಲುಕಿದ ಅನ್ನದಾತರ ಬೆನ್ನಿಗೆ ಸರಕಾರ ನಿಂತು ರೈತರಿಗೆ ಶೀಘ್ರವಾಗಿ ಪರ್ಯಾಯ ನೀಡಬೇಕು ಎಂದು ಸಮಾಜ, ಸೇವಕರಾದ ಮಹಾಂತೇಶ ಸಾಹುಕಾರ ಶಕಲಾಸಪಲ್ಲಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ