
ಈ ವರ್ಷ ರೈತರಿಗೆ ರಸಗೊಬ್ಬರ ಸಿಗದೆ ಪರದಾಡುವ ಪರಿಸ್ಥಿತಿಯಲ್ಲಿ ಇದ್ದರೂ ಕೂಡಾ ರೈತರು ಕೃಷಿಯನ್ನು ಬಿಡದೇ ಅತಿಹೆಚ್ಚು ಬಿತ್ತನೆ ಮಾಡಿ ಬೆಳೆದಿದ್ದರು. ಆದ ಕಾರಣ ಸರಕಾರ ಎಚ್ಚೆತ್ತುಕೊಂಡು ಕಂದಾಯ ಹಾಗೂ ಕೃಷಿ ಇಲಾಖೆಗಳ ಜಂಟಿ ಸಮಿಕ್ಷೆಯನ್ನು ಕೈಗೊಂಡು ನೊಂದ ರೈತರಿಗೆ ತ್ವರಿತವಾಗಿ ಪ್ರತಿ ಎಕರೆಗೆ 10000 ಸಾವಿರ ರೂಪಾಯಿಗಳಂತೆ ಪರಿಹಾರ ವಿತರಿಸಲು ಮುಂದಾಗಬೇಕು, ಸಂಕಷ್ಟಕ್ಕೆ ಸಿಲುಕಿದ ಅನ್ನದಾತರ ಬೆನ್ನಿಗೆ ಸರಕಾರ ನಿಂತು ರೈತರಿಗೆ ಶೀಘ್ರವಾಗಿ ಪರ್ಯಾಯ ನೀಡಬೇಕು ಎಂದು ಸಮಾಜ, ಸೇವಕರಾದ ಮಹಾಂತೇಶ ಸಾಹುಕಾರ ಶಕಲಾಸಪಲ್ಲಿ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್

