Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಂದಗಲ್ಲದಲ್ಲಿ ಮಹಾತ್ಮರ ಜೀವನ ದರ್ಶನ ಪ್ರಾರಂಭ

Advertisement
ಇಲಕಲ್: ಡಾ ಚನ್ನಮಲ್ಲ ಮಹಾಸ್ವಾಮಿಗಳು ಹಾಗೂ ನಂದವಾಡಗಿ ಹಿರಿಯ ಶ್ರೀಗಳಾದ ಮಹಾಂತಲಿಂಗ ಶಿವಾಚಾರ್ಯರು ಪ್ರಗತಿಪರ ರೈತರಾದ ಚನ್ನಪ್ಪಗೌಡ್ರ್ ನಾಡಗೌಡ್ರ, ಗ್ರಾಮ ಪ ಅಧ್ಯಕ್ಷ ಬಸವರಾಜ್ ಅಳ್ಳೊಳ್ಳಿ ಮಹಾತ್ಮರ ಜೀವನ್ ದರ್ಶನ,ಕಾರ್ಯಕ್ರವನ್ನು ಜ್ಯೋತಿ ಬೆಳೆಗಿಸುವದರ ಮೂಲಕ ಉದ್ಘಾಟನೆ ಮಾಡಿದರು.


ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶ್ರಾವಣ ಮಾಸದ ಅಂಗವಾಗಿ ಪುರಾಣ ಪ್ರವಚನ ಕಾರ್ಯಕ್ರಮ ಪ್ರಾರಂಭಗೊಂಡಿತು. ಈ ಕಾರ್ಯಕ್ರಮದ ನೇತೃತ್ವ ವಹಿಸಿ ಉದ್ಘಾಟನೆ ಮಾಡಿ ಆಶೀರ್ವಚನ ನೀಡಿದ ನಂದವಾಡಗಿಯ ಹಿರಿಯ ಶ್ರೀಗಳಾದ ಡಾ ಮಹಾಂತಲಿಂಗ ಶಿವಾಚಾರ್ಯರು ಪ್ರತಿದಿನ ಮಹಾತ್ಮರ ಜೀವನವನ್ನ ಭಕ್ತಿಯಿಂದ ಆಲಿಸಿ ಮಹಾತ್ಮರ ನಡೆ ನುಡಿ ಆಚಾರ ವಿಚಾರಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಂತುಸ್ಟಮವಾದ ಜೇವನ ನೆಡೆಸಿ ಎಂದು ಆಶೀರ್ವಚನ ನೀಡಿದರು.
ಕಂದಗಲ್ಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರಿಗೆ ಈ ಸಲದ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಮಹಾತ್ಮರ ಜೀವನ ದರ್ಶನವನ್ನು ಮಾಡಿಕೊಡಲಾಗುವುದು, ಭಕ್ತಿ ಹಾಗೂ ಶ್ರದ್ದೆಯಿಂದ ಶ್ರಾವಣ ಮಾಸದ ತಿಂಗಳ ಪರ್ಯಂತ ನೆಡೆಯುವ ಈ ಕಾರ್ಯಕ್ರಮ ದಲ್ಲಿ ಎಲ್ಲ ಭಕ್ತರು ಪಾಲ್ಗೊಂಡು ಮಹಾತ್ಮರ ಆದರ್ಶಗಳನ್ನ ಅನುಸರಿಸಿ ಉತ್ತಮವಾದ ಸಂಸ್ಕಾರಯುತ ಜೀವನ ನೆಡೆಸಿ ಎಂದು ಗ್ರಾಮದ ಸುವರ್ಣಗಿರಿ ಶ್ರೀ ರುದ್ರುಸ್ವಾಮಿಮಠದ ಡಾ ಚನ್ನಮಲ್ಲ ಮಹಾಸ್ವಾಮೀಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಗ್ರಾಮದ ಪ್ರಗತಿಪರ ರೈತರಾದ ಚನ್ನಪ್ಪಗೌಡ್ರ ನಾಡಗೌಡ್ರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು ಗ್ರಾಮ ಪ ಅಧ್ಯಕ್ಷ ಬಸವರಾಜ್ ಅಳ್ಳೊಳ್ಳಿ ಉಪಸ್ಥಿತರಿದ್ದರು. ಶ್ರೀ ರುದ್ರುಸ್ವಾಮಿ ಮಹಿಳಾ ಅನುಭವ ಮಂಟಪದ ಸದಸ್ಯರು ಪ್ರಾರ್ಥನೆ ಸಲ್ಲಿಸಿದರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಂಪಣ್ಣ ಸಜ್ಜನ ಸ್ವಾಗತಿಸಿದರು.

ಮಾಜಿ ತಾ ಪ ಅಧ್ಯಕ್ಷ ಮಹಾಂತೇಶ್ ಕಡಿವಾಲ ವಂದಿಸಿದರು, ಶಿಕ್ಷಕ ದೊಡ್ಡಬಸು ಮಲ್ಲಾಪುರ ನಿರೂಪಿಸಿದರು. ಗುರುವಿನಮಠ ಬಂಧುಗಳು ಪ್ರಸಾದ ವ್ಯವಸ್ಥೆ ಮಾಡಿದ್ದರು
ಈ ಭಕ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಕ್ಕಳು ಮಹಿಳೆಯರು ಯುವಕರು ಹಿರಿಯರು ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ವರದಿ: ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ