LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೊಕಟನೂರ ಗ್ರಾಮದಲ್ಲಿ ಭಕ್ತಿಭಾವದಿಂದ ಮಹಾವೀರ ಜಯಂತಿ ಆಚರಣೆ

Advertisement
ಕೊಕಟನೂರ :ಗ್ರಾಮ ಪಂಚಾಯತನಲ್ಲಿ ಮಹಾವೀರ ಜಯಂತಿಯನ್ನು ಅತ್ಯಂತ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಜೈನ ಸಮುದಾಯದ ಮುಖಂಡರು, ಗ್ರಾಮ ಪಂಚಾಯತ ಸಿಬಂದಿ ಹಾಗೂ ಗ್ರಾಮದ ಗಣ್ಯರು ಒಟ್ಟಾಗಿ ಭಾಗವಹಿಸಿ ಯಶಸ್ವಿಯಾಗಿ ನೆರವೇರಿಸಿದರು. ಬೆಳಿಗ್ಗೆ ವಿಶೇಷ ಪೂಜೆಗಳೊಂದಿಗೆ ಕಾರ್ಯಕ್ರಮ ಆರಂಭವಾಗಿ, ಬಳಿಕ ಬೀದಿ ಬೀದಿಯಲ್ಲಿ ಭವ್ಯ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿ ಮಹಾವೀರ ಸ್ವಾಮಿಗಳ ಚಿತ್ರವನ್ನು ಅಲಂಕರಿಸಿದ ರಥವನ್ನು ಕರೆದುಕೊಂಡು ಹೋಗಲಾಯಿತು. ಮಹಿಳೆಯರು ಪರಂಪರೆಯ ಕುಂಭ ಹೊತ್ತು ಭಾಗವಹಿಸಿ ಹಬ್ಬದ ಶೋಭೆಯನ್ನು ಹೆಚ್ಚಿಸಿದರು. ಭಕ್ತರು ಜಯಘೋಷಗಳನ್ನು ಕೂಗಿ, ಶಾಂತಿ, ಅಹಿಂಸೆ ಮತ್ತು ಸತ್ಯದ ಸಂದೇಶವನ್ನು ಸಾರಿದರು.



ಗ್ರಾಮದ ಎಲ್ಲ ವರ್ಗದ ಜನರು ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಮುದಾಯದ ಐಕ್ಯತೆಯನ್ನು ತೋರಿಸಿದರು. ಮಹಾವೀರ ಜಯಂತಿ ಆಚರಣೆ ಮೂಲಕ ಶಾಂತಿ ಮತ್ತು ಸೌಹಾರ್ದತೆಯ ಮಹತ್ವವನ್ನು ಎಲ್ಲರಿಗೂ ತಿಳಿಸುವ ಪ್ರಯತ್ನವೂ ಮಾಡಲಾಯಿತು.

ಇದೆ ಸಂದರ್ಭದಲ್ಲಿ ಜೈನ ಸಮಾಜದ ಅಧ್ಯಕ್ಷರಾದ ತೀರತಪ್ಪ ವೀರಗೌಡ. ಕುಮಾರ ವೀರಗೌಡ ಬಾಬು ರೊಡ್ಡ ರಾಜು ರೊಡ್ಡ ಶೀತಲ್ ವೀರಗೌಡ ಅಣ್ಣಪ್ಪ ಪಡನೂರು ಬಾಹುಬಲಿ ವೀರಗೌಡ ಹಾಗೂ ಅನೇಕ ಜೈನ ಸಮಾಜದ ಗುರು ಹಿರಿಯರು ಗ್ರಾಮದ ಮುಖಂಡರು ಭಾಗವಹಿಸಿದರು.

ವರದಿ :ಅಜಯ ಕಾಂಬಳೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ