ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ, ದರ್ಶನ ಪಡೆಯಲು 1.5 ಲಕ್ಷ ಭಕ್ತರು ಭಾಗವಹಿಸಿದ್ದಾರೆ. ಸಂಜೆ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ.
ಸಂಜೆ 6 ಗಂಟೆಯಿಂದ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜನವರಿ 19ರಂದು ಮಕರವಿಳಕ್ಕು ಹಬ್ಬ ಮುಕ್ತಾಯವಾಗಲಿದೆ. ಈಗಾಗಲೇ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನಕ್ಕಾಗಿ ಶಬರಿಮಲೆಗೆ ಆಗಮಿಸಿದ್ದಾರೆ.

