Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

13 ವರ್ಷಗಳ ಬಳಿಕ ತವರಿಗೆ ಮರಳಿದ ಮಲಾಲಾ 

Advertisement
ತಾಲಿಬಾನ್ ಉಗ್ರರಿಂದ ಗುಂಡೇಟು ತಿಂದ ನಂತರ ಮೊದಲ ಬಾರಿಗೆ ನೊಬೆಲ್ ಶಾಂತಿ ಪುರಸ್ಕೃತೆ ಮಲಾಲಾ ಯೂಸುಫ್‌ಜೈ ತಮ್ಮ ತವರುಮನೆಗೆ ಭೇಟಿ ನೀಡಿದ್ದಾರೆ.

ಈ ಭೇಟಿಯು ಕೇವಲ ಕುಟುಂಬ ಸದಸ್ಯರನ್ನು ಭೇಟಿಯಾಗುವುದಕ್ಕಷ್ಟೇ ಸೀಮಿತವಾಗಿದ್ದು, ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಅವರು ಸ್ಥಾಪಿಸಿದ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಹುರಿದುಂಬಿಸುವ ಮೂಲಕ ಮಹತ್ವ ಪಡೆದುಕೊಂಡಿದೆ.

ತಮ್ಮ ಭೇಟಿಯ ಸಮಯದಲ್ಲಿ ಮಲಾಲಾ ಅವರು, ಇಸ್ಲಾಮಾಬಾದ್‌ನಲ್ಲಿ ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ತಮ್ಮ ಚಿಕ್ಕಪ್ಪ ಅವರನ್ನು ಭೇಟಿಯಾದರು. ಜೊತೆಗೆ, ತಮ್ಮ ಪೂರ್ವಜರ ಸ್ಮಶಾನಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು.


ನಂತರ, 2018 ರಲ್ಲಿ ಬರ್ಕಾನಾದಲ್ಲಿ ತಾವು ಸ್ಥಾಪಿಸಿದ ಶಾಲೆ ಮತ್ತು ಕಾಲೇಜಿಗೆ ಭೇಟಿ ನೀಡಿದ್ದು, ಈ ಸಂಸ್ಥೆಯು ಸುಮಾರು 1,000 ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಿದೆ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಮಲಾಲಾ, ಉತ್ತಮ ಶಿಕ್ಷಣದ ಮಹತ್ವವನ್ನು ತಿಳಿಸಿ, ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಣದ ಮೇಲೆ ಗಮನಹರಿಸುವಂತೆ ಪ್ರೋತ್ಸಾಹಿಸಿದರು.


2012 ರಲ್ಲಿ, ಹೆಣ್ಣುಮಕ್ಕಳ ಶಿಕ್ಷಣದ ಹಕ್ಕಿಗಾಗಿ ಹೋರಾಡಿದ ಮಲಾಲಾ ಅವರನ್ನು ತಾಲಿಬಾನ್ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಲು ಪ್ರಯತ್ನಿಸಿದ್ದರು. ಈ ಘಟನೆಯು ಅವರ ಮೇಲೆ ದೈಹಿಕ ಮತ್ತು ಭಾವನಾತ್ಮಕ ಗಾಯಗಳನ್ನುಂಟುಮಾಡಿತು. ಆದರೂ, ಮಲಾಲಾ ಅವರು ತಮ್ಮ ಹೋರಾಟವನ್ನು ಮುಂದುವರೆಸಿದರು.


ಶಿಕ್ಷಣ ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಜಾಗತಿಕ ಪ್ರತಿಮೆಯಾದರು.ಈ ಭೇಟಿಯು ಮಲಾಲಾ ಅವರ ಹೆಣ್ಣುಮಕ್ಕಳ ಶಿಕ್ಷಣದ ಹಕ್ಕಿಗಾಗಿ ಅವರು ನಡೆಸುತ್ತಿರುವ ಹೋರಾಟಕ್ಕೆ ಇದು ಮತ್ತಷ್ಟು ಪ್ರೇರಣೆ ನೀಡಿದೆ.


 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ