Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂಡಿಗೋ ವಿಮಾನದಲ್ಲಿಯೇ ಲಾಕ್ ಆದ ಹೆಬ್ಬಾಳಕರ್ ಸೇರಿ ಹಲವು ಸಚಿವರು

Advertisement

ನವದೆಹಲಿ: ದೆಹಲಿಯಲ್ಲಿ ದಟ್ಟ ಮಂಜು, ಹೊಗೆಯ ವಾತಾವರಣದಿಂದಾಗಿ ವಿನಾನಗಳ ಹಾರಾಟದಲ್ಲಿ ವ್ಯತ್ಯಯವುಂಟಾಗಿದ್ದು, ರಾಜ್ಯದ ಹಲವು ಶಾಸಕರು, ಸಚಿವರು ವಿಮಾನದಲ್ಲಿಯೇ ಲಾಕ್ ಆಗಿರುವ ಘಟನೆ ನಡೆದಿದೆ.


ಮತಗಳ್ಳತನದ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗಿದ್ದ ಸಚಿವರು, ಶಾಸಕರು ರಾಜ್ಯಕ್ಕೆ ವಾಪಾಸ್ ಆಗಲು ವಿಮಾವೇರಿ ಕುಳಿತಿದ್ದಾರೆ.

ಆದರೆ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ದೆಹಲಿಯಿಂದ ಬೆಳಗಾವಿಗೆ ಹೋಗುವ ಇಂಡಿಗೋ ವಿಮಾನವೇರಿ ಕುಳಿತಿದ್ದ ರಾಜ್ಯದ 21 ಶಾಸಕರು ವಿಮಾನದ ಒಳಗೆ ಲಾಕ್ ಆಗಿದ್ದಾರೆ. ಆದರೆ ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಇಂದು ದಾವಣಗೆರೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ತೆರಳಲು ಶಾಸಕರು, ಸಂಸದರು ದೆಹಲಿಯಿಂದ ವಿಮಾನ ಹತ್ತಿದ್ದಾರೆ.

ಆದರೆ ದಟ್ಟ ಮಂಜು ಕವಿದ ವಾತಾವರಣದಿಂದಾಗಿ ವಿಮಾನ ಹಾರಾಟದಲ್ಲಿ ವಿಳಂಬವಾಗಿದೆ. ಇಂದು ಬೆಳಿಗ್ಗೆ5:30ಕ್ಕೆ ದೆಹಲಿಯಿಂದ ಬೆಳಗಾವಿಗೆ ವಿಮಾನ ಹೊರಡಬೇಕಿತ್ತು. ವಿಮಾನವೇರಿದ ಬಳಿಕ ಹವಾಮಾನ ವೈಪರೀತ್ಯ ಹೆಚ್ಚಿದ್ದರಿಂದ ವಿಮಾನ ಹಾರಾಟ ತಡವಾಗಿದೆ.

ಸಚಿವರಾದಲಕ್ಷ್ಮೀ ಹೆಬ್ಬಾಳಕರ್, ಹೆಚ್.ಕೆ.ಪಾಟೀಲ್,ಶರಣ ಪ್ರಕಾಶ್ ಪಾಟೀಲ್ ಸೇರಿದಂತೆ 21 ಶಾಸಕರು ವಿಮಾನದ ಒಳಗೇ ಸಿಲುಕಿದ್ದಾರೆ. ಸುಮಾರು ನಾಲ್ಕು ಗಂಟೆಗಳಿಂದ ಶಾಸಕರು ವಿಮಾನದ ಒಳಗೇ ಕುಳಿತಿದ್ದಾರೆ. ಬೆಳಿಗ್ಗೆ 10 ಗಂಟೆಯಾದರೂ ವಿಮಾನ ಟೆಕಾಫ್ ಆಗಿಲ್ಲ.

ದೆಹಲಿಯಲ್ಲಿ ದಟ್ಟ ಮಂಜು ಕವಿದ ವಾತಾವರಣದಿಂದಾಗಿ ಎಲ್ಲಾ ವಿಮಾನಗಳ ಟೇಕಾಫ್, ಲ್ಯಾಂಡಿಂಗ್ ನಲ್ಲಿ ವ್ಯತ್ಯಯವಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ