Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಿಕ್ಷಾಟನೆ ಮೂಲಕ ಮಂಗಳಮುಖಿ ಜಮನಮ್ಮಳಿಂದ ಸಾಮೂಹಿಕ ಮದುವೆ!

Advertisement
ಸಿಂಧನೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಈಜೆ ಹೊಸಳ್ಳಿ ಗ್ರಾಮದಲ್ಲಿ ವಿಶಿಷ್ಟ ಸಮಾಜಮುಖಿ ಕಾರ್ಯೊಂದು ನಡೆಯಿತು. ಮಂಗಳಮುಖಿ ಜಮುನಮ್ಮ ಅವರ ನೇತೃತ್ವದಲ್ಲಿ ಆರನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಯಿತು. ಭಿಕ್ಷಾಟನೆ ಮೂಲಕ ಸಂಗ್ರಹಿಸಿದ ಹಣದಿಂದ ಬಡ ಜೋಡಿಗಳಿಗೆ ಮದುವೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ತಾಲೂಕಿನ ಈಜೆ ಹೊಸಳ್ಳಿ ಗ್ರಾಮದ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಆರನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಮಂಗಳಮುಖಿ ಜಮುನಮ್ಮ ಹಾಗೂ ಅವರ ತಂಡ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ದಿನಾಲು ಭಿಕ್ಷಾಟನೆ ಮಾಡಿ ಸಂಗ್ರಹಿಸಿದ ಹಣವನ್ನು ಜೋಡಿಸಿ ವರ್ಷಕ್ಕೊಮ್ಮೆ ಬಡ ಕುಟುಂಬಗಳ ಜೋಡಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಮೂಹಿಕ ವಿವಾಹ ಮಾಡಿಸುವ ಕಾರ್ಯವನ್ನು ಅವರು ನಡೆಸುತ್ತಿದ್ದಾರೆ
ಇಂದಿನ ದಿನಗಳಲ್ಲಿ ಸಾಮೂಹಿಕ ವಿವಾಹಗಳನ್ನು ರಾಜಕಾರಣಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಆಯೋಜಿಸುವುದು ಸಾಮಾನ್ಯ. ಆದರೆ ಸಿಂಧನೂರಿನಲ್ಲಿ ಮಂಗಳಮುಖಿಯರು ಭಿಕ್ಷೆಯಿಂದ ಬಂದ ಹಣದಲ್ಲೇ ಬಡವರಿಗೆ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು, ಗ್ರಾಮಸ್ಥರು ಭಾಗವಹಿಸಿ ನವದಂಪತಿಗಳಿಗೆ ಆಶೀರ್ವಾದ ನೀಡಿದರು.

ಒಟ್ಟಿನಲ್ಲಿ ಸಮಾಜದಲ್ಲಿ ಸಹಾಯದ ಮನೋಭಾವ ಇನ್ನೂ ಜೀವಂತವಾಗಿರುವುದನ್ನು ಈ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತೆ ಸಾಬೀತುಪಡಿಸಿದೆ ಎಂದು ಸಾರ್ವಜನಿಕರ ಮಾತಾಗಿದೆ.

ವರದಿ  : ಬಸವರಾಜ ಬುಕ್ಕನಹಟ್ಟಿ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್