Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಟ್ಟಣ ಪಂಚಾಯಿತಿಯಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ..

Advertisement
ಮೊಳಕಾಲ್ಮೂರು:-ದುರ್ವಾಸನೆಯನ್ನು ತಾವು ಕುಡಿದು ಸುವಾಸನೆಯನ್ನು ಕೊಡುವವರೇ ಪೌರಕಾರ್ಮಿಕರು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಲೀಲಾವತಿ ಸಿದ್ದಣ್ಣ ರವರು ತಿಳಿಸಿದರು.



ಪಟ್ಟಣದಲ್ಲಿ ಸೋಮವಾರ ಪೌರಕಾರ್ಮಿಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಡೀ ಸಮಾಜವನ್ನು ಸ್ವಚ್ಛಗೊಳಿಸಿ ಸುಂದರ ಸಮಾಜವನ್ನು ನಿರ್ಮಿಸುವ ಕೆಲಸ ಪೌರಕಾರ್ಮಿಕರದು ಅವರ ಯಾವುದೇ ಕಷ್ಟಗಳಿರಲಿ ನಾನು ಅವರಿಗೆ ಸ್ಪಂದಿಸುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ನಾಮನಿರ್ದೇಶನ ಸದಸ್ಯರಾದ ಪ್ರಕಾಶ್ ಮಾತನಾಡಿ ಪೌರಕಾರ್ಮಿಕರು ಸ್ವಚ್ಛಗೊಳಿಸುವ ಡಾಕ್ಟರ್ ಇದ್ದಹಾಗೆ ಕಾಯಿಲೆ ಬಂದ ಮೇಲೆ ನಾವು ಡಾಕ್ಟರ್ ಬಳಿ ಹೋಗಿ ತಪಸ್ಸು ಮಾಡಿಸಿಕೊಳ್ಳುತ್ತೇವೆ ಆದರೆ ಪೌರಕಾರ್ಮಿಕರು ಕಾಯಿಲೆ ಬರುವ ಹಾಗೆ ನೋಡಿಕೊಳ್ಳುತ್ತಾರೆ ಎಂದರು. ಯಾವುದೇ ಬ್ಯಾಕ್ಟೀರಿಯಾ ಹರಡುದಂತೆ ಸೊಳ್ಳೆಗಳು ಉತ್ಪತ್ತಿಯಾಗದಂತೆ ರೋಗ ಹರಡದಂತೆ ತಡೆಗಟ್ಟುವ ನಿಜವಾದ ಡಾಕ್ಟರ್ ಯಾರಾದರೂ ಇದ್ದರೆ ಅದು ಪೌರಕಾರ್ಮಿಕರು ಎಂದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಪಾಲಯ ಮಾತನಾಡಿ ಈ ಹಿಂದೆ ಎರಡು ಬಾರಿ ಪೌರಕಾರ್ಮಿಕರ ದಿನಾಚರಣೆ ಆಚರಣೆ ಮಾಡಬೇಕು ಎಂದು ಇತ್ತು ಇತ್ತೀಚಿನ ದಿನಗಳಲ್ಲಿ ಸರ್ಕಾರ ಆದೇಶ ಹೊರಡಿಸಿ ಸೆಪ್ಟೆಂಬರ್ 23ರಂದು ಪೌರಕಾರ್ಮಿಕರ ದಿನಾಚರಣೆಯನ್ನು ಆಚರಣೆ ಮಾಡಬೇಕು ಎಂದಿದ್ದರು. ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡುತ್ತೇವೆ ವರ್ಷಕ್ಕೆ ಒಂದು ಬಾರಿ ಸಂಪೂರ್ಣ ಆರೋಗ್ಯ ತಪಾಸಣೆ ಮಾಡುತ್ತೇವೆ. ಸರ್ಕಾರದ ವತಿಯಿಂದ ಗೃಹ ಭಾಗ್ಯ ಯೋಜನೆಯು ಕೂಡ ಇದೆ ಇನ್ನು ಅನೇಕ ಸರ್ಕಾರ ಯೋಜನೆಗಳನ್ನು ಸದುಪಯೋಗ ಪಡೆದುಕೊಂಡು ಸ್ವಾಸ್ಥ ಸಮಾಜ ನಿರ್ಮಾಣ ಮಾಡಬೇಕು ಎಂದು ಪೌರಕಾರ್ಮಿಕರಿಗೆ ತಿಳಿಸಿದರು.

ಅದೇ ರೀತಿ ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾದ ತಿಪ್ಪೇಸ್ವಾಮಿ ಮಾತನಾಡಿ ಸುಮಾರು ದಿನಗಳಿಂದ ಸೇಫ್ಟಿ ಪರ್ಪಸ್ ಗ್ಲೌಸ್ ರನ್ ಬೂಟ್ಸ್ ಫೇಸ್ ಮಾಸ್ಕ್ ಇನ್ನು ಅನೇಕ ಮುಂಜಾಗ್ರತಾ ಸಾಮಗ್ರಿಗಳನ್ನು ನೀಡಬೇಕು ಎಂದು ಮನವಿ ಮಾಡಿದರು. ದಯವಿಟ್ಟು ನಿವೇಶನ ಕ್ಕೋಸ್ಕರ ಹಣವನ್ನು ನಿಗದಿ ಮಾಡಿದ್ದೆವು ಆ ಹಣದಲ್ಲಿ ಪೌರಕಾರ್ಮಿಕರ ಗೋಸ್ಕರ ಅಂತ ಹಂತವಾಗಿ ಮನೆ ನಿರ್ಮಾಣ ಮಾಡಬೇಕು ಎಂದರು. ನಮ್ಮ ದೇಶಕ್ಕೆ ರಾಜ್ಯಕ್ಕೆ ನಿಜವಾದ ಹೀರೋಗಳು ಯಾರಾದರೂ ಇದ್ದರೆ ಅದು ಪೌರಕಾರ್ಮಿಕರು ಎಂದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಲಕ್ಷ್ಮಣ್ ಟಿಟಿ ರವಿಕುಮಾರ್ ರೂಪ ವಿನಯ್ ಕುಮಾರ್ ಹೊಬೇದುಲ್ಲಾ, ಅಬ್ದುಲ್ಲ ಪೌರಕಾರ್ಮಿಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಭಾಗ್ಯಮ್ಮ ಭೀಮಣ್ಣ, ಎಮ್ ಎನ್ ಮಂಜಣ್ಣ ಶುಭ ಪೃಥ್ವಿರಾಜ್ ದೇವದಾಸ್ ಸಿಬ್ಬಂದಿಗಳಾದ ಶ್ರೀನಿವಾಸ್ ಕೃಷ್ಣಪ್ಪ ಮರಿಸ್ವಾಮಿ ಪೆನ್ನು ಒಬ್ಳಿ, ಪವನ್ ಪೌರಕಾರ್ಮಿಕರಾದ ಸಿದ್ದಪ್ಪ ಹನುಮಂತಪ್ಪ ಓಬಮ್ಮ ಮಲ್ಲಕ್ಕ ಗಂಗಮ್ಮ ಮಲ್ಲಮ್ಮ ನಾಗರಾಜ ಚಂದ್ರಪ್ಪ ತಿಮ್ಮಕ್ಕ ಇನ್ನು ಹಲವಾರು ಉಪಸ್ಥಿತರಿದ್ದರು.

ವರದಿ :-ಪಿಎಂ ಗಂಗಾಧರ

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ