ಮಾನ್ವಿ : ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಉತ್ತಮವಾದ ಆರೋಗ್ಯವನ್ನು ಬೆಳಸಿಕೊಂಡು ಕ್ರೀಡಾ ಮನೋಭಾವ ಬೆಳೆಸೋಣ ಆರೋಗ್ಯವಂತ ಸಮಾಜ ಕಟ್ಟೋಣ ಎಂದು ಶ್ರೀ ವೆಂಕಟೇಶ ಪ್ರೌಢ ಶಾಲೆಯ ಆಡಳಿತಾಧಿಕಾರಿಗಳಾದ ಶಂಕರಪ್ಪ ನಕ್ಕುಂದಿ ಹೇಳಿದರು. ಪಟ್ಟಣದ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟೀಯ ಸೇವಾ ಯೋಜನೆಯ ವತಿಯಿಂದ ಹಾಕಿ ಮಾಂತ್ರಿಕ ದ್ಯಾನ್ ಚಂದರವರ ಜನ್ಮದಿನದ ಅಂಗವಾಗಿ ರಾಷ್ಟೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಯಾಗಿ ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಮೈದಾನದಲ್ಲಿ ದೇಹವನ್ನು ದಣಿಸುವ ಕೆಲಸವನ್ನು ಮಾಡಿ ಎಂದು ಹೇಳಿದರು. ಇನೊರ್ವ ಉಪನ್ಯಾಸಕರಾದ ಅಂಬಣ್ಣ ನಾಯಕ ಉಮಳಿ ಹೊಸೂರು ಮಾತನಾಡಿ ಹಾಕಿ ಮಾಂತ್ರಿಕ ದ್ಯಾನ್ ಚಂದ್ ರವರ ಜೀವನ ಅವರು ನಡೆದು ಬಂದ ದಾರಿಯ ಬಗ್ಗೆ ಸಂಕ್ಷಿಪ್ತವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ರಾಷ್ಟೀಯ ಸೇವಾ ಯೋಜನೆಯ ಅಧಿಕಾರಿಗಳಾದ ಶರಣಬಸವ ಕರಡಿಗುಡ್ಡ ಮಾತನಾಡಿ ವಿದ್ಯಾರ್ಥಿಗಳು ಪ್ರತಿದಿನ ಯೋಗ ಮತ್ತು ಧ್ಯಾನ ಮಾಡುವುದರಿಂದ ಆರೋಗ್ಯವಂತರಾಗಿ ಬಾಳಬಹುದು ಎಂದು ಹೇಳಿದರು.
ಕಾರ್ಯಕ್ರಮದ ವೇದಿಕೆಯ ಅಧ್ಯಕ್ಷರಾದ ಆಂಜನೇಯ ನಸಲಾಪುರ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಆರೋಗ್ಯವಂತರಾಗಿ ಬಾಳಬೇಕೆಂದರೆ ದಿನಕ್ಕೆ ಒಂದು ಘಂಟೆಯಾದರೂ ದೇಹವನ್ನು ದಂಡಿಸಬೇಕು. ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ ಅದಕ್ಕಾಗಿ ಆರೋಗ್ಯವನ್ನು ಕಾಪಾಡಿಕೊಂಡು ಸಮಾಜದಲ್ಲಿ ಉತ್ತಮವಾಗಿ ಬಾಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುಧಾ ನಿರೂಪಿಸಿದರೆ ಹುಲಿಗೆಮ್ಮ ಸ್ವಾಗತಿಸಿದರು ಕವಿತಾ ವಂದಿಸಿದರು.
ವರದಿ : ಆಂಜನೇಯ ನಸಲಾಪುರ


