Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೇರೆ ರಾಜ್ಯಗಳಿಗಿಂತ ಹಾಲಿನ ದರ ಅತಿ ಕಡಿಮೆ : ರಾಜ್ಯ ಸರ್ಕಾರ ಸಮರ್ಥನೆ 

Advertisement
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ರಾಷ್ಟ್ರಮಟ್ಟಕ್ಕೆ ಹೋಲಿಸಿದರೇ, ಅತ್ಯಂತ ಕಡಿಮೆ ಇದೆ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಹೆಚ್ಚಿಸಿರುವಂತ ಪ್ರತಿ ಲೀಟರ್ ನಂದಿನಿ ಹಾಲಿನ ದರ ರೂ.4 ಅನ್ನು ಸಮರ್ಥಿಸಿಕೊಂಡಿದೆ.

ಈ ಬಗ್ಗೆ ಕರ್ನಾಟಕ ಹಾಲು ಮಹಾಮಂಡಲ(KMF) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಕಳೆದ ಐದು ದಶಕಗಳಿಂದ ರಾಜ್ಯದ ಹಾಲು ಉತ್ಪಾದಕರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ರೈತರ ಆರ್ಥಿಕ ಸದೃಡತೆಗಾಗಿ ಕೆಲಸ ಮಾಡುತ್ತಿದೆ.

ಕೆ.ಎಂ.ಎಫ್‌ನ ಸದಸ್ಯ ಒಕ್ಕೂಟಗಳು ಹಾಲು ಉತ್ಪಾದಕರಿಂದ ಹಾಲು ಖರೀದಿಸಿ, ಸಂಸ್ಕರಿಸಿ, ನಂದಿನಿ ಬ್ರಾಂಡ್ ಅಡಿಯಲ್ಲಿ ವಿವಿಧ ಬಗೆಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಒದಗಿಸುತ್ತಿದೆ ಎಂದಿದೆ.

ಪ್ರಸ್ತುತ, ರಾಜ್ಯದ 26.84 ಲಕ್ಷ ಹೈನುಗಾರ ರೈತರ ಪೈಕಿ ಸರಾಸರಿ 8.90 ಲಕ್ಷ ರೈತರು - ಪ್ರತಿ ದಿನ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಸುತ್ತಿದ್ದಾರೆ.

ದೇಶದ ಎರಡನೇ ಅತಿದೊಡ್ಡ ಸಹಕಾರ ಹೈನೋದ್ಯಮವಾಗಿರುವ ಕೆ.ಎಂ.ಎಫ್, ಗ್ರಾಹಕರಿಂದ ಬರುವ ಪ್ರತಿಯೊಂದು ರೂಪಾಯಿಯಲ್ಲಿ 80 ಪೈಸೆಗಿಂತ ಹೆಚ್ಚು ಹಣ ರೈತರಿಗೆ ನೇರವಾಗಿ ನೀಡುತ್ತಿದೆ. ಪ್ರತಿದಿನ, ರಾಜ್ಯದ ಹಾಲು ರೂ.28.60 ಕೋಟಿ ಹಣ ನೇರವಾಗಿ ಪಾವತಿ ಉತ್ಪಾದಕರಿಗೆ ಸರಾಸರಿ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ.

ಕೆ.ಎಂ.ಎಫ್ ಹೈನುಗಾರಿಕೆಗೆ ಪೂರಕವಾಗಿ ಪಶುವೈದ್ಯಕೀಯ ಸೇವೆ, ಕೃತಕ ಗರ್ಭಧಾರಣೆ, ಪಶು ಆಹಾರ ಪೂರೈಕೆ, ಮೇವು ಅಭಿವೃದ್ಧಿ ತರಬೇತಿ ಮುಂತಾದ ಸೌಲಭ್ಯಗಳನ್ನು ನಿರಂತರವಾಗಿ ಒದಗಿಸುತ್ತಿದೆ. ರೈತರ ಸುಧಾರಿತ ಅನುಕೂಲಕ್ಕಾಗಿ ಮೇವು ಕತ್ತರಿಸುವ ಯಂತ್ರ, ಹಾಲು ಕರೆಯುವ ಯಂತ್ರ, ರಬ್ಬರ್ ಮ್ಯಾಟ್ ಮುಂತಾದ ಉಪಕರಣಗಳನ್ನೂ ವಿತರಿಸುತ್ತಿದೆ. ವರ್ಷದ ಎಲ್ಲಾ ಸಮಯದಲ್ಲೂ ರೈತರಿಂದ ನಿರಂತರವಾಗಿ ಹಾಲು ಖರೀದಿಸಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಪಶು ಆಹಾರ ಉತ್ಪಾದನೆಗೆ ಬಳಸುವ ಮೆಕ್ಕೆಜೋಳ, ಅಕ್ಕಿತೌಡು, ಹತ್ತಿಕಾಳು ಹಿಂಡಿ, ಖನಿಜ ಪದಾರ್ಥಗಳ ಬೆಲೆ ಶೇ.35-40ರಷ್ಟು ಹೆಚ್ಚಳವಾಗಿದೆ ಹಾಗೂ ಹೈನುರಾಸುಗಳ ನಿರ್ವಹಣಾ ವೆಚ್ಚವೂ ಸಹ ಗಣನೀಯವಾಗಿ ಅಧಿಕವಾಗಿದೆ ಎಂದಿದೆ.

ದಿನಾಂಕ: 27.03.2025ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ರಾಜ್ಯದಲ್ಲಿ ಹೈನೋದ್ಯಮಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ನದಿನಿ ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಪ್ರತಿ ಲೀಟರ್/ಕೆಜಿಗೆ ರೂ.4/- ರಂತೆ ಹೆಚ್ಚಿಸಲು ಸಮ್ಮತಿಸಲಾಯಿತು. ದರ ಪರಿಷ್ಕರಣೆಯ ಮೊತ್ತವು ರಾಜ್ಯದ ಹಾಲು ಉತ್ಪಾದಕರಿಗೆ ನೇರವಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು.

ಜೊತೆಗೆ ಈ ಹಿಂದೆ ದಿನಾಂಕ 26.06.2024 ರಿಂದ ಪ್ರತಿ 1 ಲೀಟ‌ರ್ ನಂದಿನಿ ಹಾಲಿಗೆ 50 ಮಿಲಿ ಹೆಚ್ಚುವರಿ ನೀಡಿ ಸದರಿ ಪ್ರಮಾಣಕ್ಕೆ ರೂ.2/- ರಂತೆ ಹೆಚ್ಚಿಸಲಾಗಿದ್ದ ದರವನ್ನು ಹಿಂಪಡೆದು ಮೊದಲಿನಂತೆ ಯಥಾಸ್ಥಿತಿ 500 ಮಿಲಿ ಮತ್ತು 1 ಲೀಟರ್ ಮೊಟ್ಟಣದಲ್ಲಿ ಪ್ರಸ್ತುತ ರೂ.4/- ದರ ಪರಿಷ್ಕರಣೆಯನ್ನು ಅಳವಡಿಸಿಕೊಂಡು ಮಾರಾಟಕ್ಕೆ ಕ್ರಮವಿಡಲು ತಿಳಿಸಲಾಗಿದೆ ಎದು ಹೇಳಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ