Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಪೀಡಿತ ಪ್ರದೇಶಗಳಿಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಭೇಟಿ.

Advertisement
ಸೇಡಂ:-ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಮಳಖೇಡ್ ಕೋಟೆಯ ಹೊರಭಾಗದ ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಮಂಗಳವಾರ ಕ್ಷೇತ್ರದ ಶಾಸಕರಾಗಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಅಧಿಕಾರಿಗಳೊಂದಿಗೆ ಕೋಟೆಗೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಬಗ್ಗೆ ಪರಿಶೀಲಿಸಿದರು.



ಈ ವೇಳೆ ಮಾತನಾಡಿದ ಸಚಿವರು, ಹಿಂದೆ ತಮ್ಮ ಸರ್ಕಾರದ ಅವಧಿಯಲ್ಲಿಯೇ ಕೋಟೆ ಸಂರಕ್ಷಣೆಗೆ 6 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅದರ ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿ ಪ್ರಗತಿ ವಿವರವನ್ನು ಅಧಿಕಾರಿಗಳಿಂದ ಪಡೆದು ಅದಕ್ಕೆ ವೇಗ ನೀಡಲಾಗುವುದು ಎಂದರು.

ಕಳೆದ ಎರಡೂರು ದಿನದಿಂದ ಸತತ ಮಳೆಯಾಗುತ್ತಿರುವ ಕಾರಣ ಸೇಡಂ ತಾಲೂಕಿನ ವಿವಿಧೆಡೆ ರಸ್ತೆ, ಸೇತುವೆ, ಮನೆ ಹಾನಿಗಳಾಗಿವೆ. ಕೂಡಲೆ ಅಧಿಕಾರಿಗಳಿಗೆ ಸರ್ವೆ ಮಾಡಲು ಸೂಚಿಸಿದ್ದು ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಪರಿಹಾರ ಒದಗಿಸಲಾಗುವುದು. ಇನ್ನು ಬೆಳೆ ಹಾನಿಗೆ ಸಂಬಂಧಿಸಿದಂತೆ ಕಂದಾಯ, ಕೃಷಿ, ತೋಟಗಾರಿಕೆ ಅಧಿಕಾರಿಗಳಿಂದ ಜಂಟಿ ಸರ್ವೇ ಮಾಡಲು ಸೂಚನೆ ನೀಡಲಾಗಿದೆ ಎಂದರು.ಇದೇ ಸಂದರ್ಭದಲ್ಲಿ ಕೋಟೆ ಬಳಿ ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿ, ಕೂಡಲೆ ಪರಿಹಾರ ಒದಗಿಸಲಾಗುವುದು ಎಂದರು.

ಇದಕ್ಕೂ ಮುನ್ನ ಸಚಿವರು ಕಾಗಿಣಾ ನದಿಗೆ ಅಡ್ಡಲಾಗಿರುವ ಇತ್ತೀಚೆಗೆ ಲೋಕಾರ್ಪಣೆಗೊಂಡ ಮಳಖೇಡ್ ಸೇತುವೆ ಹಾಗೂ ಪಕ್ಕದಲ್ಲಿರುವ ಉತ್ತರಾದಿ ಮಠ ಬೃಂದಾವನ ವೀಕ್ಷಿಸಿದರು. ಸೇತುವೆ ಬಳಿ ಮೀನುಗಾರಿಕೆ ಮಾಡಿಕೊಂಡ ಮೀನುಗಾರರನ್ನು ಪ್ರವಾಹ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದ್ದು, ಮೀನುಗಾರರನ್ನು ಸಹ ಸಚಿವರು ಭೇಟಿಯಾಗಿ ಪ್ರವಾಹ ಹಿನ್ನೆಲೆಯಲ್ಲಿ ಮೀನುಗಾರಿಕೆ ಮಾಡದಂತೆ ತಿಳಿಸಿ ಅಲೆಮಾರಿಯವರಿಗೆ 2 ಎಕರೆ ಜಮೀನು ಗುರುತಿಸುವ ಕಾರ್ಯ ನಡೆದಿದೆ ಎಂದರು.

ಸಂಸದ ರಾಧಾಕೃಷ್ಣ ದೊಡ್ಡಮನಿ, ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಶೀಲ್ದಾರ ಶ್ರೇಯಾಂಕಾ ಧನಶ್ರೀ, ತಾಲೂಕಾ ಪಂಚಾಯತ್ ಇ.ಓ ಸೇರಿದಂತೆ ಅನೇಕ ಅಧಿಕಾರಿಗಳು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಇದ್ದರು.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ