
ಈ ವೇಳೆ ಮಾತನಾಡಿದ ಸಚಿವರು, ಸಂತಿ ಬಸ್ತವಾಡ ಹಾಗೂ ಉಚಗಾಂವ ಸುತ್ತಮುತ್ತಲಿನ ಗ್ರಾಮಗಳ ರೈತರ ಅನೂಕೂಲಕ್ಕಾಗಿ ಈ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯಿಂದ ರೈತರ ಹೊಲಗದ್ದೆಗಳಿಗೆ ನೀರು ಸಿಗಲಿದೆ. ರೈತರ ಹಾಗೂ ಗ್ರಾಮೀಣ ಭಾಗದ ಆರ್ಥಿಕತೆ ದೃಷ್ಟಿಯಿಂದ ಈ ಯೋಜನೆ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ನರೇಂದ್ರ ರೆಡ್ಡಿ, ಯುವರಾಜ ಕದಂ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

