Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖಾನಾಪೂರ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ,

Advertisement
 ಪಶ್ಚಿಮಘಟ್ಟಗಳಲ್ಲಿರುವ ಗ್ರಾಮಗಳಿಗೆ ಮೂಲ ಭೂತ ಸೌಕರ್ಯ ಒದಗಿಸಲು ಕ್ರಮ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಭೀತಿಯಲ್ಲಿರುವ ಖಾನಾಪೂರ ತಾಲೂಕಿನ ಮಲಪ್ರಭಾ ಬ್ರಿಡ್ಜ್ ಮತ್ತು ರುಮೇವಾಡಿ ಬ್ಯಾರೇಜ್ ವೀಕ್ಷಿಸಿ, ಪ್ರವಾಹದಿಂದ ನಾಶವಾಗಿರುವ ಮನೆ, ಬೆಳೆ ಹಾಗೂ ಬ್ರಿಡ್ಜ್ ಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.



ಖಾನಾಪೂರ ತಾಲೂಕಿನ ಪಶ್ಚಿಮಘಟ್ಟಗಳ ಪ್ರದೇಶದಲ್ಲಿರುವ ಗುಡ್ಡದ ಮಧ್ಯೆಯದಲ್ಲಿರುವ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದೇ ನಮ್ಮ ಉದ್ದೇಶ. ಮುಂದಿನ ದಿನಗಳಲ್ಲಿ ಮಳೆಯಿಂದ ಜೀವಹಾನಿಯಾಗದಂತೆ ಕ್ರಮಕೈಗೊಳ್ಳಲಾಗುವುದು. ಅರಣ್ಯ‌ ಇಲಾಖೆಯ ಕಠಿಣ ನಿಲುವುಗಳಿಂದ ಕೆಲ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡಲು ಸಾಧ್ಯವಾಗುತ್ತಿಲ್ಲ ಎಂದರು.

ಮನೆ ಬಿದ್ದ ತಕ್ಷಣ 1.20 ಲಕ್ಷ ರೂಪಾಯಿ ಹಣ, ಜೊತೆಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 1.80 ಲಕ್ಷ ಹಣ ನೀಡಲಾಗುತ್ತಿದ್ದು, ಭಾಗಶಃ ಬಿದ್ದ ಮನೆಗೆ ನೀಡಲಾಗುತ್ತಿರುವ ಮೊತ್ತವನ್ನು 10 ಸಾವಿರ‌ ರೂಪಾಯಿಂದ 50 ಸಾವಿರ ರೂಪಾಯಿಗೆ ಏರಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಮಳೆಗಾಲದ ವೇಳೆ ಬೆಳಗಾವಿ - ಗೋವಾ ನಡುವಿನ ಮುಖ್ಯ ರಸ್ತೆ ಜಾಮ್ ಆಗುತ್ತಿದ್ದು, ಶೀಘ್ರವೇ ಗೋವಾ ಮುಖ್ಯ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದ್ದು, 100 ಕೋಟಿ ವೆಚ್ಚದಲ್ಲಿ ಹಟ್ಟಿಹೊಳಿ ಬ್ರಿಡ್ಜ್ ನಿರ್ಮಾಣವಾಗಲಿದೆ ಎಂದು‌ ಹೇಳಿದರು.



ಬಿಜೆಪಿಯವರ ಪಾದಯಾತ್ರೆಗೆ ಶುಭವಾಗಲಿ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಪಾದಯಾತ್ರೆ ಮಾಡುತ್ತಿರುವ ಪ್ರತಿಯೊಬ್ಬರಿಗೂ ಶುಭಾಶಯಗಳು, ಮಳೆ ಬರುತ್ತಿರುವ ಕಾರಣ ಒಳ್ಳೆಯ ಶೂ, ರೈನ್ ಕೋಟ್ ತೆಗೆದುಕೊಂಡು ಹೋಗಲಿ ಎಂದು ಸಚಿವರು ಹೇಳಿದರು.

ಈ ವೇಳೆ ಸ್ಥಳೀಯ ಖಾನಾಪುರ ಶಾಸಕರಾದ ವಿಠ್ಠಲ ಹಲಗೇಕರ್, ನೀರಾವರಿ ಹಾಗೂ ಕಂದಾಯ ಇಲಾಖೆ, ನೀರಾವರಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ