
ನಗರ ಪ್ರವೇಶಿಸುತ್ತಿದ್ದಂತೆ ಶಾಸಕರಾದ ಎಚ್.ಡಿ. ತಮ್ಮಯ್ಯ ಹಾಗೂ ನಯನಾ ಮೋಟಮ್ಮ ಮತ್ತು ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು, ಅಧಿಕಾರಿಗಳು ಸಚಿವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.
ಇದಕ್ಕೂ ಮೊದಲು, ಜಿಲ್ಲಾ ಗಡಿ ಗ್ರಾಮ ಮಾಗಡಿಯಲ್ಲಿ ಸಹ ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯನವರು ಸಚಿವರನ್ನು ಸ್ವಾಗತಿಸಿದರು.
ಈ ವೇಳೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ತಹಶಿಲ್ದಾರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಪ್ರತೀಕ ಚಿಟಗಿ

