Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ

Advertisement
ಬೆಳಗಾವಿ: ಬೆಳಗಾವಿ ಉತ್ತರ ಹಾಗೂ ಗ್ರಾಮೀಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಶಾಸಕ ರಾಜು ಸೇಠ್ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರವಾಗಿ ಮತಯಾಚನೆ ಮಾಡಿದರು.



ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ತೆಂಗಿನಕೇರಿಗಲ್ಲಿ, ನೆಹರು ನಗರ ಹಾಗೂ ಅಶೋಕ ನಗರ, ಗಾಂಧಿನಗರದ ದೀಪಕ್ ಗಲ್ಲಿ, ದೀಪಕ್ ಕಾಲೋನಿಗಳಲ್ಲಿ ಪ್ರಚಾರ ಮಾಡಲಾಯಿತು. ಈ ವೇಳೆ ನಾಗರಿಕರಿಂದ ಅತ್ಯುತ್ತಮ ಬೆಂಬಲ ದೊರೆಯಿತು. ಈ ಬಾರಿ ಮೃಣಾಲ ಹೆಬ್ಬಾಳಕರ್ ಆಯ್ಕೆ ಖಚಿತ ಎಂದು ಜನರು ಅಭಯ ನೀಡಿದರು.

ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕ ರಾಜು ಅಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಎ.ಪಿ‌.ಎಂ.ಸಿ ಮಾಜಿ ಅಧ್ಯಕ್ಷರಾದ ಶಿವನಗೌಡ ಪಾಟೀಲ್, ಮುಖಂಡರಾದ ರಾಜಶೇಖರ ತಲ್ವಾರ್, ನಿಖಿಲ್ ರವೀಂದ್ರ ಮೂಲ್ಕೋಟೆ, ಅಮನ್ ಸೇಠ್ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.



ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಂಗ್ರಾಳಿ ಕೆ.ಎಚ್ ಗ್ರಾಮದಲ್ಲಿ ಸಚಿವರು ಪ್ರಚಾರ ನಡೆಸಿದರು. ಈ ಸಮಯದಲ್ಲಿ ಲತಾ ಪಾಟೀಲ, ಬಾಳಾರಾಮ ಪಾಟೀಲ, ಜ್ಯೋತಿ ಪಾಟೀಲ, ವೀಣಾ ಮುತಗೇಕರ, ಮನೋಹರ್ ಪಾಟೀಲ, ಸುಧೀರ ಪಾಟೀಲ, ಕೆಂಪಣ್ಣ ಎಸ್, ರಾಧಾ ಕಾಂಬಳೆ, ಮೋಹನ್ ಪಾಟೀಲ, ಆನಂದ ಭಜಂತ್ರಿ ಉಪಸ್ಥಿತರಿದ್ದರು.
ನಂತರ ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ ಮತಯಾಚನೆ ಮಾಡಲಾಯಿತು. ಗ್ರಾಮ ಪಂಚಾಯತಿ ಅಧ್ಯಕ್ಷ ಕೌಸರಜಹಾನ್ ಸಯ್ಯದ್, ಜಯರಾಮ ಪಾಟೀಲ್, ದತ್ತಾ ಪಾಟೀಲ್, ಉಮೇಶ ಪಾಟೀಲ, ಶೀತಲ್ ಪಾಟೀಲ, ಸುವರ್ಣ ಲಕ್ಕಣ್ಣವರ, ಫಕೀರಪ್ಪ ಬೆಳಗಾವಿ, ಮೇನಕಾ ಕುರುಡೆ, ಶಕುಂತಲಾ ಸಿಂಗ್, ವೇದಿಕಾ ಪಠಾಣಿ, ಗಾಯತ್ರಿ ಪಾಟೀಲ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ನಂತರ, ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಹಾಪೂರದ‌ ಗಾಡೆ ಮಾರ್ಗ್ ಸಿದ್ದಾರ್ಥ ಕಾಲೋನಿಯ ಚಲವಾದಿ ಸಮಾಜ ಸೇವಾ ಕಮಿಟಿ ಹಾಲ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ ನಡೆಸಿದರು. ಈ ಸಮಯದಲ್ಲಿ ನಾಗರಾಜ ನಾಯಕ, ಸಾಗರ‌ ಹವಾಲ್ದಾರ್, ಸುನೀಲ್ ಬಸ್ತವಾಡೇಕರ್, ನಿಖಿಲ್ ಕೋಲಕಾರ್, ಯುವರಾಜ ತಳವಾರ, ಪ್ರಣಯ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ :- ಪ್ರತೀಕ್ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ