Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಂಪೂರ ಕೆರೆ ಪ್ರದೇಶಕ್ಕೆ ಸಚಿವರಾದ ಎನ್‌ ಎಸ್ ಬೋಸರಾಜು ಭೇಟಿ: ಪರಿಶೀಲನೆ

Advertisement
ರಾಯಚೂರ : ರಾಯಚೂರು ಜಿಲ್ಲೆಯ ಪ್ರವಾಸಲ್ಲಿರುವ ಸಚಿವರಾದ ಎನ್ ಎಸ್ ಬೋಸರಾಜು ಅವರು ಪೂರ್ವನಿಗದಿಯಂತೆ ಫೆ.18ರಂದು ರಾಯಚೂರ ನಗರ ಪ್ರದೇಶದಲ್ಲಿ ಸಂಚರಿಸಿದರು.
ರಾಯಚೂರ ನಗರ ಕ್ಷೇತ್ರದ ಶಾಸಕರಾದ ಡಾ.ಎಸ್. ಶಿವರಾಜ ಪಾಟೀಲ ಅವರೊಂದಿಗೆ
ಬೆಳಗ್ಗೆ ರಾಯಚೂರ ನಗರದ ಹೊರ ವಲಯದಲ್ಲಿನ ರಾಂಪೂರ ಕೆರೆ ಪ್ರದೇಶಕ್ಕೆ ಭೇಟಿ ನೀಡಿ ನಗರಸಭೆಯ ಅಧೀನದಲ್ಲಿನ ಅಂದಾಜು 32 ಎಕರೆಯ ಹೊಸ ಕೆರೆ ಮತ್ತು 10 ಎಕರೆಯ ಹಳೆಯ ಕೆರೆಗಳ ವೀಕ್ಷಣೆ ನಡೆಸಿದರು.

ಕರ್ನಾಟಕ ನೀರಾವರಿ ನಿಗಮ ನಿಯಮಿತ ಕೆಎನ್ ಎಲ್ ಎಲ್ ದ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಮತ್ತು ತುಂಗಭದ್ರಾ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳ ಮೂಲಕ ಗಣೇಕಲ್ ನೀರು ಸಂಗ್ರಹ ಕೇಂದ್ರದಿಂದ ಬರುವ ನೀರನ್ನು ಕೆರೆಗಳಿಗೆ ತುಂಬಿಸುವುದರ ಬಗ್ಗೆ ಸಚಿವರು ಇದೆ ವೇಳೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಗ್ರ್ಯಾವಿಟಿ ನಿರ್ಮಾಣಕ್ಕೆ ಕ್ರಮ: ಗಣೇಕಲ್ ನೀರು ಸಂಗ್ರಹ ಕೇಂದ್ರದಿಂದ ಪ್ರತಿ ಬಾರಿ ಕೆನಾಲಗೆ ನೀರು ಬಂದಾಗ ಕೆರೆಗಳನ್ನು ತುಂಬಿಸುವ ಬದಲಾಗಿ ಗ್ರ್ಯಾವಿಟಿ ಮೂಲಕ ಕೆರೆಗಳಿಗೆ ನೀರು ತುಂಬಿಸುವುದು ಉತ್ತಮ. ಹೀಗಾಗಿ ಈ ಪ್ರದೇಶದಲ್ಲಿ ಹೊಸದಾಗಿ ಗ್ರ್ಯಾವಿಟಿ ರಿಸರ್ವರ್ ನಿರ್ಮಾಣ ಮಾಡುವುದರ ಬಗ್ಗೆ ಪರಿಶೀಲಿಸಬೇಕು ಎಂದು ಇದೆ ವೇಳೆ ಸಚಿವರು ಜಿಲ್ಲಾಧಿಕಾರಿಗಳು ಮತ್ತು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆ ಹೂಳೆತ್ತಲು ಕ್ರಮವಹಿಸಿ: ಹಳೆಯ ಕೆರೆಯಲ್ಲಿನ ಹೂಳು ಎತ್ತಿ ಅಲ್ಲಿನ ಮಣ್ಣನ್ನು ಪರೀಕ್ಷೆಗೊಳಪಡಿಸಿ ತಜ್ಞರ ವರದಿ ಪಡೆದು ನೀರು ಶೇಖರಣೆ ಮಾಡಿದಲ್ಲಿ ನೀರು ಸಂಗ್ರಹವಾಗಿ ಬೇಸಿಗೆಯ ಸಮಯದಲ್ಲಿ 13 ವಾರ್ಡಗಳಿಗೆ ಸಮರ್ಪಕವಾಗಿ ನೀರು ಹರಿಸಲು ಸಾಧ್ಯವಾಗುತ್ತದೆ. ಅದ್ದರಿಂದ ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂದು ಇದೆ ವೇಳೆ ಸಚಿವರು ನಗರಸಭೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸಿ: ಹೆಚ್ಚುವರಿ ಪಂಪ್ ಅಳವಡಿಸಿ ನೀರಿನ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಆರೋಗ್ಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಲ್ಯಾಬ್ ಪರೀಕ್ಷೆ ನಡೆಸಬೇಕು ಎಂದು ಇದೆ ವೇಳೆ ಸಚಿವರು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲಶುದ್ದೀಕರಣ ಘಟಕಕ್ಕೆ ಭೇಟಿ: ಸಚಿವರು ಹಾಗೂ ಶಾಸಕರು ಇದೆ ವೇಳೆ ಕೆರೆ ಪ್ರದೇಶದಲ್ಲಿನ ಜಲಶುದ್ದೀಕರಣ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಪ್ರಯೋಗಾಲಯ, ಕ್ಲ್ಯಾರಿಪೈರ್, ಕೆಮಿಕಲ್ ಹೌಸ್, ನೀರು ಶುದ್ದೀಕರಣ ಘಟಕದ ವೀಕ್ಷಣೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಪತ್ರ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಗುರುಸಿದ್ದಯ್ಯ ಹಿರೇಮಠ, ಮುಖಂಡರಾದ ಜಯಣ್ಣ, ಕೆ ಶಾಂತಪ್ಪ, ಜಿ ಶಿವಮೂರ್ತಿ, ಮಾಡಗೇರಿ ನರಸಿಂಹಯ್ಯ, ಗುಡಸಿ ತಿಮ್ಮಾರೆಡ್ಡಿ, ಬಿ ರಮೇಶ, ಬಸವರಾಜ ಪಾಟೀಲ ಅತನೂರ ಹಾಗೂ ಇತರರು ಉಪಸ್ಥಿತರಿದ್ದರು.

ವರದಿ : ಗಾರಲದಿನ್ನಿ ವೀರನ ಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ