Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ : ಭಕ್ತರಿಗೆ ಗಾಯ

Advertisement
ಬೆಂಗಳೂರು: ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬೆಂಗಳೂರಿನ ಚಾಮರಾಜಪೇಟೆ ಸಮೀಪದ ಜಗಜೀವನ್ ರಾಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.

ಜೆಜೆ ನಗರದ ವಿಎಸ್ ಗಾರ್ಡನ್ ಓಂ ಶಕ್ತಿ ದೇವಾಲಯದ ಬಳಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ವರದರಾಜು ಎಂಬುವರ ಅಪ್ರಾಪ್ತ ಪುತ್ರಿಯ ತಲೆಗೆ ಗಂಭೀರ ಗಾಯವಾಗಿದೆ.

ಮತ್ತೊಬ್ಬ ಬಾಲಕಿ ಹಾಗೂ ಮಹಿಳೆಗೂ ಗಾಯಗಳಾಗಿವೆ ಎನ್ನಲಾಗಿದ್ದು, ಮಾಹಿತಿ ತಿಳಿದ ಜೆಜೆ ನಗರ ಠಾಣೆ ಪೊಲೀಸರು ಮತ್ತು ಎಸಿಪಿ ಭರತ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಓಂಶಕ್ತಿ ಮಾಲಾಧಾರಿಗಳು ಹಾಗೂ ಸ್ಥಳೀಯರು ಜೆಜೆ ನಗರ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಈ ಹಿಂದೆಯೂ ಅನ್ಯಕೋಮಿನವರು ಕಲ್ಲುತೂರಾಟ ನಡೆಸಿದ್ದರು. ಇತ್ತೀಚೆಗೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಭಜನೆ ಮಾಡುವಾಗ ವಾಟರ್ ಬಾಟಲ್ ಗಳನ್ನು ತೂರಿದ್ದರು. ಈ ರೀತಿ ಹಲವು ಬಾರಿ ಘಟನೆಗಳು ನಡೆದಿದ್ದು, ಪೊಲೀಸರು ಕ್ರಮ ಕೈಗೊಂಡಿಲ್ಲ. ಈಗ ಮತ್ತೆ ಕಲ್ಲು ತೂರಾಟದಿಂದ ಮೂವರಿಗೆ ಗಾಯವಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅನ್ಯ ಕೋಮುವಿನ ಏರಿಯಾದಿಂದ ಕಲ್ಲುಗಳು ತೂರಿ ಬಂದಿವೆ. ಕಲ್ಲು ಎಸೆದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ