
ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೂಡಲೇ ಅಧಿಕಾರಿಗಳು ಸಂತ್ರಸ್ತ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ವರದಿ ಮಾಡುವಂತೆ ಸೂಚನೆ ನೀಡಿ ಹಾಗೂ ಸ್ಥಳಿಯ ಅಧಿಕಾರಿಗಳು ಕೂಡಿಕೊಂಡು ಸಮನ್ವತೆಯಿಂದ ಕೆಲಸ ಮಾಡಲು ತಿಳಿಸಿ ಸಂತ್ರಸ್ಥರಿಗೆ ತೊಂದರೆ ಆಗದಂತೆ ಖಡಕ ಸೂಚನೆ ನೀಡಿದರು.

ಗೋಕಾಕ ತಹಶೀಲ್ದಾರ ಮೋಹನ್ ಭಸ್ಮೆ, ಮೂಡಲಗಿ ತಹಶೀಲ್ದಾರ ಶ್ರೀಶೈಲ ಗುಡುಮೆ, ಮೂಡಲಗಿ ತಾ.ಪಂ. ಇಓ ಎಫ್.ಜಿ.ಚಿನ್ನನ್ನವರ, ಗೋಕಾಕ ತಾ.ಪಂ.ಇಓ ಪರಶುರಾಮ ಗಸ್ತಿ, ಡಿವೈಎಸ್ಪಿ ರವಿ ನಾಯಿಕ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಧಿಕಾರಿಗಳ ಸಭೆಗೂ ಮುನ್ನ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಲೋಳಸೂರ ಸೇತುವೆಗೆ ತೆರಳಿ ನೀರಿನ ಪರಿಸ್ಥಿತಿಯನ್ನು ಅವಲೋಕಿಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.
ಮನೋಹರ ಮೇಗೇರಿ

