LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್'ಗೆ ಜಾಮೀನು ಮಂಜೂರು

Advertisement

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ಭೈರತಿ ಬಸವರಾಜ್ ಅವರಿಗೆ ಜಾಮೀನು ಮಂಜೂರು ಮಾಡಿದೆ.ಬಿಕ್ಲುಶಿವ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ಭೈರತಿ ಬಸವರಾಜ್ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು.


ಬಸವರಾಜ್ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಭೈರತಿ ಬಸವರಾಜ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.


2 ಲಕ್ಷ ರೂ.ಬಾಂಡ್, ಇಬ್ಬರು ಶ್ಯೂರಿಟಿ ಮೇಲೆ ಜಾಮೀನು ಮಝೂರು ಮಾಡಿದ್ದು, ಕೆಲ ಷರತ್ತುಗಳನ್ನು ಕೋರ್ಟ್ ವಿಧಿಸಿದೆ.


ಸಾಕ್ಷ್ಯ ನಾಶ ಮಾಡುವಂತಿಲ್ಲ. ಕೋರ್ಟ್ ಅನುಮತಿ ಇಲ್ಲದೇ ಹೊರಗಡೆ ಹೋಗುವಂತಿಲ್ಲ. ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವಂತಿಲ್ಲ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿದೆ.


ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಶಾಸಕ ಭೈರತಿ ಬಸವರಾಜ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.


ಕಿತ್ತಗನೂರಿನ ಜಮೀನು ವಿವಾದದ ಹಿನ್ನೆಲೆಯಲ್ಲಿ ಕಳೆದ ವರ್ಷ ಜುಲೈ 15 ರಂದು ದುಷ್ಕರ್ಮಿಗಳ ಗುಂಪೊಂದು ಮಾಜಿ ರೌಡಿ ಶೀಟರ್ ಬಿಕ್ಲು ಶಿವನನ್ನು ಮಚ್ಚು, ಲಾಂಗ್​ಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು.


ಮೃತನ ತಾಯಿ ಭೈರತಿ ಬಸವರಾಜ್​​ ಸೇರಿದಂತೆ ಹಲವರ ಮೇಲೆ ದೂರು ನೀಡಿದ್ದರು. ತನ್ನ ಮಗನ ಕೊಲೆ ಹಿಂದೆ ಭೈರತಿ ಬಸವರಾಜ್ ಕೈವಾಡ ಇದೆ ಅಂತಾ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.


ಎ1 ಜಗದೀಶ್ ಜೊತೆ ಶಾಸಕರಿಗೆ ನಂಟು ಇದೆ ಎಂಬ ಆರೋಪವಿದ್ದು, ಕೊಲೆ ಕೇಸ್‌ನಲ್ಲಿ ಭೈರತಿ ಬಸವರಾಜ್ A5 ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಬಂಧನಕ್ಕಾಗಿ ಪೊಲೀಸರು ಹುಡುಕುತ್ತಿದಂತೆ ಶಾಸಕರು ತಲೆಮರೆಸಿಕೊಂಡಿದ್ದರು. ಬಳಿಕ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿಳಿಯುತ್ತಿದ್ದಂತೆ ಶಾಸಕ ಭೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು.


Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ