Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚೆಕ್ ಡ್ಯಾಂಗಳ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಚಾಲನೆ

Advertisement
ಸಣ್ಣ ನೀರಾವರಿ ಇಲಾಖೆಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ರೂ.100 ಲಕ್ಷ ವೆಚ್ಚದಲ್ಲಿ 2 ಚೆಕ್ ಡ್ಯಾಂಗಳ ನಿರ್ಮಾಣ ಕಾಮಗಾರಿಗೆ ಶಾಸಕ ಹಾಗೂ ಕ.ಗೃ.ಮಂ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಇಂದು ತಿರುಪತಿ ಗ್ರಾಮದ ಬಳಿ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು ನಾನು ಶಾಸಕನಾಗುವುದಕ್ಕಿಂತ ಮೊದಲು ನಮ್ಮ ಅರಸೀಕೆರೆ ಕ್ಷೇತ್ರ ಬಯಲು ಸೀಮೆ ಬರಪೀಡಿತ ಪ್ರದೇಶವಾಗಿತ್ತು, ಅಂತರ್ಜಲ ಮಟ್ಟ ಸಾವಿರಾರು ಅಡಿಗೆ ಇಳಿದಿತ್ತು, ಇದನ್ನು ಮನಗಂಡು ಸದನದಲ್ಲಿ ಹೋರಾಟ ಮಾಡಿ ಅಂತರ್ಜಲ ಅಭಿವೃದ್ಧಿ ಆಗಬೇಕಾದರೆ ಚೆಕ್ ಡ್ಯಾಂ ಗಳನ್ನ ನಿರ್ಮಾಣ ಮಾಡಬೇಕೆಂದು ಸರ್ಕಾರಗಳಿಗೆ ಒತ್ತಾಯ ಮಾಡಿ ಅನುದಾನ ತರಲಾಯಿತು.



ಅದರ ಪರಿಣಾಮ ನಮ್ಮ ಕ್ಷೇತ್ರದಲ್ಲಿ ನೂರಾರು ಚೆಕ್ ಡ್ಯಾಂಗಳು ನಿರ್ಮಾಣವಾದವು. ಇಂದು ನಾವು ಅಂತರ್ಜಲ ಶೇಖರಣೆಯಲ್ಲಿ ನಾವು ಮುಂದಿದ್ದೇವೆ.ಇಂದು ಕೇವಲ 200 ರಿಂದ 300 ಅಡಿಗಳಲ್ಲಿ ನೀರು ದೊರೆಯುತ್ತಿದೆ. ಇದರಿಂದ ರೈತರುಗಳಿಗೆ ಅನುಕೂಲವಾಗಿದೆ. ಇಂತಹ ಯೋಜನೆಗಳನ್ನು ಮತ್ತೂ ಮುಂದುವರಿಸಲಾಗುವುದು ಎಂದರು.

ಈ ಕಾರ್ಯಕ್ರಮ ದಲ್ಲಿ ಅಗ್ಗುಂದ ಮಾಜಿ ಅಧ್ಯಕ್ಷ ರಾದ ತಿರುಪತಿ ಗಿರೀಶ, ಮುಖಂಡರಾದ ತಿರುಪತಿ ಚಂದ್ರಣ್ಣ, ರಂಗಸ್ವಾಮಿ, ಕಾರೆಹಳ್ಳಿ ಈಶಣ್ಣ, ಬೊಮ್ಮೇನಹಳ್ಳಿ ವಡ್ಡರಹಟ್ಟಿ ರೇವಣ್ಣ, ಗೊಲ್ಲರಹಟ್ಟಿ ರಾಜಶೇಖರ, ಬೋರನಕೊಪ್ಪಲು ಶಿವಲಿಂಗಪ್ಪ, ಯಳವಾರೆ ಕೇಶವಣ್ಣ, ಇಂಜಿನಿಯರ್ ಉಮೇಶ, ಗುತ್ತಿಗೆದಾರ ಜ್ಞಾನೇಶ ಹಾಗೂ ಗ್ರಾಮಸ್ಥರು ಹಾಜರಿದ್ದರು..

ವರದಿ :ರಾಜು ಅರಸಿಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ