LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚೆಕ್ ಡ್ಯಾಂಗಳ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಚಾಲನೆ

Advertisement
ಸಣ್ಣ ನೀರಾವರಿ ಇಲಾಖೆಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ರೂ.100 ಲಕ್ಷ ವೆಚ್ಚದಲ್ಲಿ 2 ಚೆಕ್ ಡ್ಯಾಂಗಳ ನಿರ್ಮಾಣ ಕಾಮಗಾರಿಗೆ ಶಾಸಕ ಹಾಗೂ ಕ.ಗೃ.ಮಂ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಇಂದು ತಿರುಪತಿ ಗ್ರಾಮದ ಬಳಿ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು ನಾನು ಶಾಸಕನಾಗುವುದಕ್ಕಿಂತ ಮೊದಲು ನಮ್ಮ ಅರಸೀಕೆರೆ ಕ್ಷೇತ್ರ ಬಯಲು ಸೀಮೆ ಬರಪೀಡಿತ ಪ್ರದೇಶವಾಗಿತ್ತು, ಅಂತರ್ಜಲ ಮಟ್ಟ ಸಾವಿರಾರು ಅಡಿಗೆ ಇಳಿದಿತ್ತು, ಇದನ್ನು ಮನಗಂಡು ಸದನದಲ್ಲಿ ಹೋರಾಟ ಮಾಡಿ ಅಂತರ್ಜಲ ಅಭಿವೃದ್ಧಿ ಆಗಬೇಕಾದರೆ ಚೆಕ್ ಡ್ಯಾಂ ಗಳನ್ನ ನಿರ್ಮಾಣ ಮಾಡಬೇಕೆಂದು ಸರ್ಕಾರಗಳಿಗೆ ಒತ್ತಾಯ ಮಾಡಿ ಅನುದಾನ ತರಲಾಯಿತು.



ಅದರ ಪರಿಣಾಮ ನಮ್ಮ ಕ್ಷೇತ್ರದಲ್ಲಿ ನೂರಾರು ಚೆಕ್ ಡ್ಯಾಂಗಳು ನಿರ್ಮಾಣವಾದವು. ಇಂದು ನಾವು ಅಂತರ್ಜಲ ಶೇಖರಣೆಯಲ್ಲಿ ನಾವು ಮುಂದಿದ್ದೇವೆ.ಇಂದು ಕೇವಲ 200 ರಿಂದ 300 ಅಡಿಗಳಲ್ಲಿ ನೀರು ದೊರೆಯುತ್ತಿದೆ. ಇದರಿಂದ ರೈತರುಗಳಿಗೆ ಅನುಕೂಲವಾಗಿದೆ. ಇಂತಹ ಯೋಜನೆಗಳನ್ನು ಮತ್ತೂ ಮುಂದುವರಿಸಲಾಗುವುದು ಎಂದರು.

ಈ ಕಾರ್ಯಕ್ರಮ ದಲ್ಲಿ ಅಗ್ಗುಂದ ಮಾಜಿ ಅಧ್ಯಕ್ಷ ರಾದ ತಿರುಪತಿ ಗಿರೀಶ, ಮುಖಂಡರಾದ ತಿರುಪತಿ ಚಂದ್ರಣ್ಣ, ರಂಗಸ್ವಾಮಿ, ಕಾರೆಹಳ್ಳಿ ಈಶಣ್ಣ, ಬೊಮ್ಮೇನಹಳ್ಳಿ ವಡ್ಡರಹಟ್ಟಿ ರೇವಣ್ಣ, ಗೊಲ್ಲರಹಟ್ಟಿ ರಾಜಶೇಖರ, ಬೋರನಕೊಪ್ಪಲು ಶಿವಲಿಂಗಪ್ಪ, ಯಳವಾರೆ ಕೇಶವಣ್ಣ, ಇಂಜಿನಿಯರ್ ಉಮೇಶ, ಗುತ್ತಿಗೆದಾರ ಜ್ಞಾನೇಶ ಹಾಗೂ ಗ್ರಾಮಸ್ಥರು ಹಾಜರಿದ್ದರು..

ವರದಿ :ರಾಜು ಅರಸಿಕೆರೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ