Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಸಬಾ ಹೋಬಳಿ ಕಾರೆಹಳ್ಳಿ ತಾಂಡ್ಯದ ಮೋನಿಕ ಅವರ ಸ್ವಗ್ರಾಮಕ್ಕೆ ಭೇಟಿ : ಶಾಸಕ ಕೆಎಂ ಶಿವಲಿಂಗೇಗೌಡರು

Advertisement
ಅರಸೀಕೆರೆ : ತಾಲೂಕು ಕಸಬಾ ಹೋಬಳಿ ಕಾರೆಹಳ್ಳಿ ತಾಂಡ್ಯದ ಮೋನಿಕ ಅವರ ಸ್ವಗ್ರಾಮಕ್ಕೆ ಭೇಟಿ ನೀಡಿದ ಕ್ಷೇತ್ರದ ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷರಾದ ಕೆಎಂ ಶಿವಲಿಂಗೇಗೌಡರು

ಸಂಜೆ 7:30 ರ ಸಮಯದಲ್ಲಿ ಭೇಟಿ ನೀಡಿ ದುಃಖಭರಿತ ಸಂದರ್ಭದಲ್ಲಿ ಭೇಟಿ ಮಾಡಿ ಕುಟುಂಬದ ನೋವಿನಲ್ಲಿ ಪಾಲುಗೊಂಡು ಆತ್ಮೀಯವಾಗಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿ ಮೋನಿಕಾ ರವರ ಕಳೆದುಕೊಂಡ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹಾರೈಸಿದರು.

ಅವರ ಕುಟುಂಬಕ್ಕೆ ವೈಯಕ್ತಿಕವಾಗಿ ₹25,000 ಧನಸಹಾಯವನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ,ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿ ಕುಟುಂಬಕ್ಕೆ ತಲುಪಿಸುವುದಾಗಿ ಭರವಸೆ ನೀಡಿದರು.



ಮೃತಪಟ್ಟ ಮೋನಿಕ ಅವರು ತಮ್ಮ ಅಂಗಾಂಗ ದಾನದ ಮೂಲಕ ನಾಲ್ಕು ಜನರಿಗೆ ಜೀವದಾನ ನೀಡಿ ಅನನ್ಯ ಮಾನವೀಯತೆಯನ್ನು ತೋರಿದ್ದಾರೆ.

ತಮ್ಮ ಬದುಕಿನ ಕೊನೆಯ ಕ್ಷಣದಲ್ಲಿಯೂ ಇತರರ ಬದುಕಿಗೆ ಬೆಳಕು ನೀಡಿದ ಅವರ ಈ ಮಹಾನ್ ಕಾರ್ಯ ನಿಜಕ್ಕೂ ಶ್ಲಾಘನೀಯ. ಮೋನಿಕ ಅವರ ಈ ತ್ಯಾಗ ಮತ್ತು ದಾನ ಮನೋಭಾವವು ಸಮಾಜಕ್ಕೆ ಮಾದರಿಯಾಗಿ ಉಳಿದು, ಇನ್ನೂ ಅನೇಕರು ಅಂಗಾಂಗ ದಾನದ ಮಹತ್ವವನ್ನು ಅರಿತು ಮುಂದೆ ಬರಲು ಪ್ರೇರಣೆಯಾಗುತ್ತದೆ.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಸಾಕಿ ಮಂಜುನಾಥ್, ಸುನಿಲ್ ನಾಯ್ಕ್, ಈಶ್ವರ್ ನಾಯ್ಕ್, ಕೃಷ್ಣ ನಾಯ್ಕ, ಹಾಗೂ ಬಂಜಾರ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಜನಪ್ರತಿನಿಧಿಯಾಗಿ ಮಾತ್ರವಲ್ಲ, ಒಬ್ಬ ಮಾನವೀಯ ವ್ಯಕ್ತಿಯಾಗಿ ಅವರ ಈ ನಡೆ ಎಲ್ಲರ ಹೃದಯವನ್ನು ಸ್ಪರ್ಶಿಸಿದೆ.

ದುಃಖದಲ್ಲಿರುವ ಕುಟುಂಬಕ್ಕೆ ಧೈರ್ಯ ತುಂಬಿದ ಈ ಕಾರ್ಯ ನಿಜಕ್ಕೂ ಮಾನವೀಯತೆಯ ಶ್ರೇಷ್ಠ ಉದಾಹರಣೆಯಾಗಿದೆ.

ವರದಿ : ರಾಜು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ